ಪೆಟ್ರೋಲ್ ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿ ಸೈಕಲ್, ಎತ್ತಿನಗಾಡಿ ಮೇಲೇರಿ ಪ್ರತಿಭಟನೆ | JANATA NEWS
![](https://www.janata.news/2024/June/Jimg/1718898176.png)
ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ತೈಲ ಬೆಲೆ ಏರಿಸಿ ಜನ ಸಾಮಾನ್ಯರಿಗೆ ಹೊರೆಯಾಗಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಪೆಟ್ರೋಲ್ ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿ ಸೈಕಲ್, ಎತ್ತಿನಗಾಡಿ ಮೇಲೇರಿ ಪ್ರತಿಭಟನೆ ನಡೆಸಿದೆ.
ಅನಿಯಮಿತ ಬೆಲೆಯೇರಿಕೆ ಮೂಲಕ ನಾಡಿನ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ !
ಪೆಟ್ರೋಲ್-ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಇಂದು ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಸಿಟಿ.ರವಿ ಅವರು, "ಬೆಲೆ ಏರಿಕೆ ಮೂಲಕ ಜನರ ಬದುಕನ್ನು ದುಷ್ಕರಗೊಳಿಸಲು ಹೊರಟಿದೆ ಎಲ್ಲಾ ದರಗಳ ಏರಿಕೆಗೆ ಮುಂದಾಗಿದೆ. ಜನ ವಿರೋಧಿ ನೀತಿ ಸರ್ವಾಧಿಕಾರಿ ನೀತಿ ಸಾರ್ವಜನಿಕವಾಗಿ ಸೈಕಲ್ ನಲ್ಲಿ ಹೋಗೋದಕ್ಕೂ ಬಿಡದಂತಹ ಸರ್ವಾಧಿಕಾರಿ ನೀತಿಯ ವಿರುದ್ಧ ನಮ್ಮ ಹೋರಾಟವಿದೆ. ಈ ಜನ ವಿರೋಧಿ ನೀತಿಯನ್ನು ಹಿಂತೆ ತೆಗೆದುಕೊಳ್ಳುವವರೆಗೂ ನಾವು ವಿಧಾನಸಭೆಯ ಒಳಗಡೆ ವಿಧಾನಸಭೆ ಹೊರಗಡೆ ಹೋರಾಟ ಮಾಡುತ್ತೇವೆ. ಈ ಸರ್ಕಾರ ಇಂದಿನ ದರ ಹೆಚ್ಚಿಸುವ ಮೂಲಕ ನೀರಿನ ಬೆಲೆ ಹೆಚ್ಚಳ ಮೂಲಕ ವಿದ್ಯುತ್ ಶಕ್ತಿ ಇದರ ಹೆಚ್ಚಳದ ಮೂಲಕ ಜನವಿರೋಧಿ ಯಾಗಿ ವರ್ತನೆ ಮಾಡುತ್ತಿದೆ. ಜನ ವಿರೋಧಿ ನೀತಿ ವಿರುದ್ಧ ನಮ್ಮ ಹೋರಾಟ", ಎಂದು ಹೇಳಿದ್ದಾರೆ. ಬಳಿಕ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬಿ.ವೈ. ವಿಜಯೇಂದ್ರ ಮಾತನಾಡಿ, ‘ರಾಜ್ಯ ಸರ್ಕಾರದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ನಿರ್ಧಾರವನ್ನು ವಿರೋಧಿಸಿ ಕಳೆದೆರಡು ದಿನಗಳಿಂದ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ... ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದರೂ ಇಂದಿಗೂ ಸರ್ಕಾರ ತನ್ನ ನಿರ್ಧಾರ ಬದಲಿಸಿಲ್ಲ. ಸಿಎಂ ತಮ್ಮ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ...ಆದರೆ ರಾಜ್ಯ ಸರ್ಕಾರ ಈಗಲೇ ತೆಗೆದುಕೊಂಡಿರುವ ನಿರ್ಧಾರವನ್ನು ಮುಂದುವರೆಸಿಕೊಂಡು ಹೋಗುತ್ತಿದ್ದು, ಬಿಜೆಪಿ ಸುಮ್ಮನಿರುವುದಿಲ್ಲ. ..ಬೆಂಗಳೂರಿನಲ್ಲಿ ಸೈಕಲ್ ಯಾತ್ರೆ ಕೈಗೊಳ್ಳುತ್ತಿದ್ದೇವೆ...", ಎಂದಿದ್ದಾರೆ.