ಕಾರು ರಿವರ್ಸ್ ತೆಗೆಯುವಾಗ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದು ತಂದೆ ತಾಯಿ ಮಗ ದುರ್ಮರಣ! | Janata news
ಯಾದಗಿರಿ : ಮುಖ್ಯ ಕಾಲುವೆಯ ಬಳಿ ಕಾರ್ ರಿವರ್ಸ್ ತೆಗೆದುಕೊಳ್ಳುವಾಗ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದೆ.
ಈ ಕಾರ್ನಲ್ಲಿ ಒಂದೇ ಕುಟುಂಬದ ಐವರು ಇದ್ದರು. ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನಟ್ಟಿ ಗ್ರಾಮದ ಪವನ್ ಬಿರಾದಾರ್ (34), ಪವನ್ ತಂದೆ ಶರಣಗೌಡ ಬಿರಾದಾರ್ (61), ತಾಯಿ ಜಾನಕಿ ಬಿರಾದಾರ್ (55) ಮೃತರು.
ಕಾರಿನಲ್ಲಿದ್ದ ಪ್ರೇಮಾ ಮಗುವಿನೊಂದಿಗೆ ಕಾಲುವೆಯಲ್ಲಿ ಈಜುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಲುಂಗಿಯ ಸಹಾಯದಿಂದ ತಾಯಿ ಮತ್ತು ಮಗು ಇಬ್ಬರನ್ನು ರಕ್ಷಿಸಿದ್ದಾರೆ.
ಈ ಕುರಿತು ಹುಣಸಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :Accident in yadagiri