ಚಿಕ್ಕಪ್ಪನ ಕಣ್ಣಿಗೆ ಖಾರದ ಪುಡಿ ಎರಚಿ, ಚಾಕುವಿನಿಂದ ಕತ್ತು ಕೊಯ್ದ ಕೊಲೆ! | Janata news
ಗದಗ : ಯುವಕನೊಬ್ಬ ಚಿಕ್ಕಪ್ಪನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಬೆಟಗೇರಿಯ ಕುರಹಟ್ಟಿ ಪೇಟೆನಲ್ಲಿ ನಡೆದಿದೆ.
ಪ್ರವೀಣ್ ಗದುಗಿನ ಎಂಬಾತ ಆರೋಪಿ. ತನ್ನ ಚಿಕ್ಕಪ್ಪ 42 ವರ್ಷದ ಮಂಜುನಾಥ ಗದುಗಿನ ಎಂಬವರನ್ನು ಪ್ರವೀಣ್ ಭೀಕರವಾಗಿ ಕೊಲೆಗೈದಿದ್ದಾನೆ.
ಪ್ರವೀಣ್ ಮನೆ ಬಳಿಬಂದು ಮಂಜುನಾಥ್ ಅಶ್ಲೀಲವಾಗಿ ಬೈದಾಡುತ್ತಿದ್ದ. ಇದರಿಂದ ರೊಚ್ಚಿಗೆದ್ದ ಯುವಕ ಚಿಕ್ಕಪ್ಪನ ಕಣ್ಣಿಗೆ ಖಾರದ ಪುಡಿ ಎರಚಿ, ಚಾಕುವಿನಿಂದ ಕತ್ತುಕೊಯ್ದು ಕೊಂದು ಹಾಕಿದ್ದಾನೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ.
ಬೆಟಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ನಾಪತ್ತೆಯಾದ ಆರೋಪಿಗೆ ಬಲೆ ಬೀಸಿದ್ದಾರೆ.
ಈ ಕುರಿತು ಗದಗನ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :Gadag