ಮೊಮ್ಮಗನ ಸಾವಿನ ಸುದ್ದಿಯಿಂದ ಆಘಾತಗೊಂಡು ಪ್ರಾಣಬಿಟ್ಟ ಅಜ್ಜಿ! | ಜನತಾ ನ್ಯೂಸ್
ಮಡಿಕೇರಿ : ಮೊಮ್ಮಗನ ಸಾವಿನ ಸುದ್ದಿಯಿಂದ ಆಘಾತಗೊಂಡ ಅಜ್ಜಿ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ತನ್ನ ಸ್ನೇಹಿತರೊಂದಿಗೆ ನಿನ್ನೆ ಆಟವಾಡಲೆಂದು ತೆರಳಿದ್ದ ವಿದ್ಯಾರ್ಥಿ ಮುಬಾಷೀರ್ (18) ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಈ ಬಗ್ಗೆ ಸ್ನೇಹಿತರೊಂದಿಗೆ ಪ್ರಶ್ನಿಸಿದಾಗ ಸುಂಟಿಕೊಪ್ಪ ಸಮೀಪ ಹೊಸತೋಟದ ಹಾರಂಗಿ ಹಿನ್ನೀರಿನಲ್ಲಿ ಸ್ನಾನಕ್ಕೆಂದು ನೀರಿಗಿಳಿದ ಮುಬಶೀರ್ ಹೊಳೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಮೃತದೇಹ ನೋಡುತ್ತಿದ್ದಂತೆ ಸಾವಿನ ಆಘಾತದಿಂದ ಅಜ್ಜಿ ರುಕಿಯಾ (62) ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದಿದ್ದಾರೆ.
ರಾತ್ರಿ 10 ಗಂಟೆವರೆಗೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸಿ, ಸುಂಟಿಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
English summary :Madikeri