ಆತ್ಮಹತ್ಯೆಗೆ ಶರಣಾದ ಬಿಎಂಟಿಸಿ ಬಸ್ ಚಾಲಕ | ಜನತಾ ನ್ಯೂಸ್
ಗದಗ : ಬೆಂಗಳೂರಿನ ಬಿಎಂಟಿಸಿಯಲ್ಲಿ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನಿಡಗುಂದಿ ಗ್ರಾಮದ ನಿವಾಸಿ ಅಲ್ಲಾಸಾಬ್ ತಾಳಕೇರಿ (40) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಸಾರಿಗೆ ಮುಷ್ಕರದ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ನಿಡಗುಂದಿ ಗ್ರಾಮಕ್ಕೆ ಬಂದಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡ ಆತ್ಮಹತ್ಯೆ ಶರಣಾಗಿದ್ದಾರೆ
6ನೇ ವೇತನ ಆಯೋಗಕ್ಕೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ 8ನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯ ಸರಕಾರ ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿಗೆ ಮಾರ್ಚ್ ತಿಂಗಳ ವೇತನ ಬಿಡುಗಡೆ ಮಾಡಿಲ್ಲ.
ಆರ್ಥಿಕ ಸಂಕಷ್ಟದಲ್ಲಿ ಟಿಪ್ಪು ಕುಟುಂಬಕ್ಕೆ ಮಾರ್ಚ್ ತಿಂಗಳ ವೇತನ ಬಿಡುಗಡೆ ಆಗದೇ ಇದ್ದಿದ್ದರಿಂದ ಮಕ್ಕಳಿಗೆ ಬಟ್ಟೆ ಕೊಡಿಸಲು ಆಗಿರಲಿಲ್ಲ. ಇದರಿಂದ ಮನೆಯಲ್ಲಿ ಪದೇಪದೆ ಜಗಳ ಆಗುತ್ತಿದ್ದು, ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.