ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ ಫಾರ್ಮಸಿಸ್ಟ್ ಬಂಧನ: ಸಾವಿರಾರು ರೂ. ಮೌಲ್ಯದ ಔಷಧಿ ವಶ | ಜನತಾ ನ್ಯೂಸ್
ಚಿತ್ರದುರ್ಗ : ಸರ್ಕಾರಿ ಆಸ್ಪತ್ರೆಯಲ್ಲಿ ಫಾರ್ಮಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ ಖಾಸಗಿ ಕ್ಲಿನಿಕ್ ಮೇಲೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ತಡರಾತ್ರಿ ದಾಳಿ ಮಾಡಿ, ಸಾವಿರಾರು ರೂಪಾಯಿ ಮೌಲ್ಯದ ಔಷಧಿಗಳನ್ನು ವಶಪಡಿಸಿಕೊಂಡಿರುವ ಘಟನೆ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಫಾರ್ಮಸಿಸ್ಟ್ ವಿವೇಕಾನಂದ ಎಂಬಾತ ತಾಲೂಕಿನ ಜವನಗೊಂಡನಹಳ್ಳಿಯಲ್ಲಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ. ಖಚಿತ ಮಾಹಿತಿ ಆಧರಿಸಿ ತಹಶೀಲ್ದಾರ್ ಜಿ.ಎಚ್. ಸತ್ಯನಾರಾಯಣ, ಸಿಪಿಐ ರಾಘವೇಂದ್ರ, ಟಿಎಚ್ಓ ಡಾ. ವೆಂಕಟೇಶ್ ನೇತೃತ್ವದ ತಂಡ ದಾಳಿ ನಡೆಸಿದಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ.
ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವಿವೇಕಾನಂದ ಬಂಧಿತ ಆರೋಪಿ ಎನ್ನಲಾಗಿದೆ. ಸರ್ಕಾರದಿಂದ ಬರುವ ಔಷಧಿ, ಇಂಜೆಕ್ಷನ್, ಮಾತ್ರೆಗಳು, ಸಿರೆಂಜ್ಗಳು ಹಾಗೂ ಸರ್ಕಾರದ ಔಷಧಿಗಳನ್ನು ದುರುಪಯೋಗಪಡಿಸಿಕೊಂಡು ಜವನಗೊಂಡನಹಳ್ಳಿಯ ಮನೆಯಲ್ಲಿ ಅನಧಿಕೃತವಾಗಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ ಎನ್ನಲಾಗಿದೆ.
ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.