ಕೊರೊನಾ ಸೋಂಕಿಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ವೈದ್ಯ ಬಲಿ | ಜನತಾ ನ್ಯೂಸ್
ಬಳ್ಳಾರಿ : ವಿಮ್ಸ್ ವೈದ್ಯ ಡಾ. ವಿಜಯ ಶಂಕರ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಶಾಸ್ತ್ರೀನಗರದ ನಿವಾಸಿಯಾದ ಡಾ. ವಿಜಯ ಶಂಕರ್ (49) ವಿಮ್ಸ್ ಆಸ್ಪತ್ರೆಯ ಚರ್ಮ ರೋಗ ತಜ್ಞರಾಗಿದ್ದರು. ಸೋಂಕು ತಗುಲಿದ ಕಾರಣ ನಗರದ ಆರಾಧನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕಳೆದ ಒಂದು ವಾರದಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ವೈದ್ಯರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ ನಾಲ್ಕು ವರ್ಷಗಳ ಹಿಂದೆ ಕಿಡ್ನಿ ಕಸಿ ಮಾಡಿಸಿಕೊಂಡಿದ್ದರು.
ಕಳೆದ ಒಂದು ತಿಂಗಳ ಹಿಂದೆ ಎರಡೂ ಡೋಜ್ ವ್ಯಾಕ್ಸಿನ್ ಸಹ ಪಡೆದಿದ್ದರು. ಅತೀವ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಡಾ. ವಿಜಯ ಶಂಕರ್ಗೆ ಆರೋಗ್ಯದಲ್ಲಿ ಅತೀವ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನ ಬೆಂಗಳೂರಿನ ನಾರಾಯಣ ಹೃದಯಾಲಯದ ಕೋವಿಡ್ ಕೇರ್ ಸೆಂಟರ್ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.