ರಾತ್ರಿ ನಿದ್ದೆ ಬಾರದೆ ಮನೆಯಿಂದ ಹೊರಗೆ ಬಂದ ಯುವಕನ ಬರ್ಬರ ಕೊಲೆ | ಜನತಾ ನ್ಯೂಸ್
ರಾಯಚೂರು : ನಿದ್ದೆ ಬಾರದೆ ಮಧ್ಯರಾತ್ರಿ ಮನೆಯಿಂದ ಹೊರ ಬಂದ ಯುವಕನನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ತಾಲೂಕಿನ ಮರ್ಚಡ್ ಗ್ರಾಮದಲ್ಲಿ ನಡೆದಿದೆ.
ರಾಯಚೂರು ತಾಲೂಕಿನ ಮರ್ಚಡ್ ಗ್ರಾಮದ ತಾಯಪ್ಪ(26) ಮೃತ ದುರ್ದೈವಿ. ನಿನ್ನೆ ರಾತ್ರಿ ವಿದ್ಯುತ್ ಇಲ್ಲದ ಕಾರಣಕ್ಕೆ ಸೆಖೆಯೆಂದು ಮನೆಯ ಹೊರಗೆ ಮಲಗುವುದಾಗಿ ಹೋಗಿದ್ದ. ದೇವಸ್ಥಾನದ ಬಳಿ ಕೆಲ ಹೊತ್ತು ಕುಳಿತ್ತಿದ್ದ ಎನ್ನಲಾಗಿದೆ.
ಕಿಡಿಗೇಡಿಗಳು ಆತನ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮದುವೆಗೆ ಹೆಣ್ಣು ಹುಡುಕುತ್ತಿದ್ದ ತಾಯಪ್ಪ ಎರಡು ದಿನಗಳ ಕೆಳಗೆ ಮನೆಯಲ್ಲಿ ಮಾರೆಮ್ಮ ದೇವಿಗೆ ಪೂಜೆ ಮಾಡಿಸಿದ್ದನು. ಮಗನನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿತ್ತು.
English summary :Rayachuru