ಲಾರಿ-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು, ನಡುರಸ್ತೆಯಲ್ಲೇ ಹೊತ್ತಿ ಉರಿದ ಬೈಕ್ | ಜನತಾ ನ್ಯೂಸ್
ತುಮಕೂರು : ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಕುಳಿತಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿ ನಡೆದಿದೆ.
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಯಲ್ಲೇ ಬೈಕ್ ಹೊತ್ತಿ ಉರಿದಿದೆ. ಸಾಗರನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಘಟನೆ ಸಂಭವಿಸಿದೆ. ಅಪಘಾತದಿಂದ ಬೈಕ್ಗೆ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾಗಿದೆ.
ರಾಮಚಂದ್ರ(30) ಮತ್ತು ಪ್ರಿಯಾ(25) ಮೃತ ದುರ್ದೈವಿಗಳು. ಇವರಿಬ್ಬರೂ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಮೂಲದವರು. ಅಂಚೆ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು.
ಘಟನೆ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :Tumkur