Fri,May10,2024
ಕನ್ನಡ / English

ನಾಯಕತ್ವ ಬದಲಾವಣೆ ಹಾದಿ ಬೀದಿಯ ಚರ್ಚೆ ವಿಷಯವಲ್ಲ: ನಳಿನ್ ಕುಮಾರ್ ಕಟೀಲ್ | ಜನತಾ ನ್ಯೂಸ್

05 Jul 2021
2496

ಹಾವೇರಿ: : ನಾಯಕತ್ವದ ಚರ್ಚೆಯನ್ನ ಹಾದಿ ಬೀದಿಯಲ್ಲಿ ಮಾಡುವಂಥದ್ದಲ್ಲ. ಶಾಸಕಾಂಗ ಸಭೆಗಳನ್ನ ಕರೆಯುತ್ತದೆ. ಅಲ್ಲಿ ಚರ್ಚೆ ನಡೆಸಬೇಕು. ಅದನ್ನು ಬಿಟ್ಟು ದಾರಿಯಲ್ಲಿ ಮಾತನಾಡಿದರೆ ನಾಯಕತ್ವ ಬದಲಾವಣೆ ಆಗೋದಿಲ್ಲ ಎಂದು ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿಕೆ ನೀಡಿದರು.

ಹಿರೇಕೇರೂರಿನಲ್ಲಿ ಮಾತನಾಡಿದ ಅವರು. ಕಾಂಗ್ರೆಸ್ ಮುಳುಗುವ ಹಡಗು. ಕಾಂಗ್ರೆಸ್ ಹಡಗಿಗೆ ತೂತು ಬಿದ್ದಿದೆ. ಯಾವಾಗ ಮುಳುಗುತ್ತೋ ಗೊತ್ತಿಲ್ಲ. ಯಾರಾದರೂ ಬಂದು ರಕ್ಷಿಸಲಿ ಎಂದು ಡಿ ಕೆ ಶಿವಕುಮಾರ್ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಮುಳುಗುವ ಹಡಗನ್ನು ಹತ್ತುವ ಜನ ಇಲ್ಲ. ಹೀಗಾಗಿ ಯಾವ ಪಕ್ಷದವರಾದರೂ ನಮ್ಮ ಹಡಗು ಹತ್ತಲಿ ಎಂದು ಬಾಂಬೆ ಟೀಂ ಶಾಸಕರಿಗೆ ಡಿ.ಕೆ ಶಿವಕುಮಾರ್ ಮತ್ತ ಕಾಂಗ್ರೆಸ್ ಪಕ್ಷ ಸೇರಿ ಎಂಬ ಆಫರ್ ನೀಡಿದೆ ಎಂದರು.

ಯತ್ನಾಳ ಅವರ ಆಗಸ್ಟ್​ನಲ್ಲಿ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಹೇಳಿಕೆಯ ಕುರಿತಂತೆ ಪ್ರತಿಕ್ರಿಯಿಸಿದ ಅವರು, ನಾಯಕತ್ವ ಬದಲಾವಣೆಯ ಕುರಿತಂತೆ ಯಾವುದೇ ಗೊಂದಲಗಳು ಬೇಡ, ನಾಯಕತ್ವ ಬದಲಾವಣೆ ಅಥವಾ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಬಿಜೆಪಿಯಲ್ಲಿ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ಸಿಎಂ ನಿವಾಸದ ಹಿಂದೆ ನೂರಾರು ಕೋಟಿ ರೂಪಾಯಿ ಅವ್ಯವಹಾರ ನಡೆಯುತ್ತದೆ ಎಂಬ ಯತ್ನಾಳ್ ಅವರ ಆರೋಪಕ್ಕೆ ಪ್ರತಿಯಾಗಿ, ಯತ್ನಾಳ್ ಅವರ ಹೇಳಿಕೆಗಳಿಗೆ ನಾನು ಹೆಚ್ಚು ಗೌರವಗಳನ್ನು ಕೊಡುವುದಿಲ್ಲ ಎಂದು ಕಟೀಲ್ ಹೇಳಿದರು.

ಯೋಗೇಶ್ವರ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಅವರು ಯಾವ ರೀತಿಯಾದ ಭಾವನೆಯಲ್ಲಿ ಮಾತನಾಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಅದರ ವಿವರಣೆಯನ್ನು ಕೇಳುತ್ತೇನೆ. ಮಾಧ್ಯಮಗಳ ಮುಂದೆ ನಮ್ಮ ಸರ್ಕಾರ, ನಮ್ಮ ಮಂತ್ರಿಗಳು ಹಾಗೂ ಶಾಸಕರು ಮಾತನಾಡಬಾರದು. ಜನರ ಪ್ರಾಣ ರಕ್ಷಣೆಯ ಕೆಲಸ ಮಾಡಲು ಸರ್ಕಾರಕ್ಕೆ ಆಶೀರ್ವಾದ ಮಾಡಿದ್ದಾರೆ. ಯೋಗೇಶ್ವರ್‌ ಏನು ಹೇಳಿದ್ದಾರೆ ಎನ್ನುವ ವಿವರಣೆ ಪಡೆದುಕೊಳ್ಳುತ್ತೇನೆ" ಎಂದು ಹೇಳಿದ್ದಾರೆ.

"ಬಿಜೆಪಿಯಲ್ಲಿ ಸದ್ಯ ನಾಯಕತ್ವ ಬದಲಾವಣೆ ಹಾಗೂ ಸಿಎಂ ಬದಲಾವಣೆಯ ಬಗ್ಗೆ ಚರ್ಚೆ ಇಲ್ಲ. ಹಾದಿ-ಬೀದಿಯಲ್ಲಿ ನಾಯಕತ್ವದ ಚರ್ಚೆ ಮಾಡುವಂತದಲ್ಲ.ದಾರಿಯಲ್ಲಿ ಮಾತನಾಡಿದರೆ ನಾಯಕತ್ವ ಬದಲಾವಣೆ ಆಗುವುದಿಲ್ಲ. ಇದಕ್ಕಾಗಿ ಶಾಸಕಾಂಗ ಸಭೆ ಕರೆಯಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸ-ಕಾರ್ಯಗಳಿಗೆ ಜನರು ಆಶೀರ್ವದಿಸಿದ್ದಾರೆ.ಇವರ ದುರಹಂಕಾರದ ಕಾರಣದಿಂದ ಲೋಕಸಭೆಯಲ್ಲಿ ವಿರೋಧ ಪಕ್ಷದ ಯೋಗ್ಯತೆಯನ್ನೂ ಕೊಟ್ಟಿಲ್ಲ. ಈ ಬಗ್ಗೆ ಅರಿತು ಮಾತನಾಡಬೇಕು" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :Nalin Kumar Kateel

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...