ಮುರ್ಡೇಶ್ವರಕ್ಕೆ ಬಂದಿದ್ದ ಶಿವಮೊಗ್ಗದ ಪ್ರವಾಸಿಗರಿಬ್ಬರು ನೀರು ಪಾಲು, ಒಬ್ಬರ ಶವ ಪತ್ತೆ | ಜನತಾ ನ್ಯೂಸ್
ಭಟ್ಕಳ : ತಾಲ್ಲೂಕಿನ ಮುರ್ಡೇಶ್ವರಕ್ಕೆ ಪ್ರವಾಸ ಬಂದಿದ್ದ ಶಿವಮೊಗ್ಗ ಜಿಲ್ಲೆಯ ನಾಲ್ವರು ಪ್ರವಾಸಿಗರಲ್ಲಿ, ಇಬ್ಬರು ಸಮುದ್ರದಲ್ಲಿ ಭಾನುವಾರ ನೀರು ಪಾಲಾಗಿದ್ದಾರೆ. ಒಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬರಿಗೆ ಹುಡುಕಾಟ ಮುಂದುವರಿದಿದೆ.
ಶಿವಮೊಗ್ಗ ಜಿಲ್ಲೆಯ ಈಜಲು ಸಮುದ್ರಕ್ಕೆ ಇಳಿದಿದ್ದವರ ನಾಲ್ವರ ಪೈಕಿ ಇಬ್ಬರು ಅಲೆಗಳಿಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ. ಬಳಿಕ ಇಬ್ಬರ ಶವವಾಗಿ ಪತ್ತೆಯಾಗಿದೆ, ನಾಲ್ವರ ಪೈಕಿ ಇಬ್ಬರು ಬಂಡೆ ಹಿಡಿದುಕೊಂಡು ಬಚಾವಾಗಿದ್ದಾರೆ. ಆದರೆ, ಮತ್ತಿಬ್ಬರು ನೀರಿನ ಸೆಳೆತಕ್ಕೆ ಕೊಚ್ಚಿ ಕೊಂಡು ಹೋಗಿದ್ದಾರೆ..
ಭಟ್ಕಳದಲ್ಲಿ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಸೆಳೆತ ಜೋರಾಗಿದೆ. ಸಮುದ್ರ ಪ್ರಕ್ಷುಬ್ಧವಾಗಿರುವ ಕಾರಣ ದೇವಸ್ಥಾನದ ಬಲಭಾಗದಲ್ಲಿ ಸಮುದ್ರಕ್ಕೆ ಪ್ರವಾಸಿಗರು ತೆರಳುವುದನ್ನು ಪ್ರವಾಸೋದ್ಯಮ ಇಲಾಖೆ ನಿಷೇಧಿಸಿದೆ. ಆದರೆ, ಪ್ರವಾಸಿಗರು ದೇವಸ್ಥಾನದ ಎಡಭಾಗದಲ್ಲಿ ಕದ್ದುಮುಚ್ಚಿ ಈಜಲು ಹೋಗಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಕುರಿತು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.