ಯಡಿಯೂರಪ್ಪ ಕರ್ನಾಟಕ ಕಂಡ ಭ್ರಷ್ಟ ಮುಖ್ಯಮಂತ್ರಿ, ಇನ್ನೊಬ್ಬ ಬಂದರೂ ಭ್ರಷ್ಟ ಆಗಿರ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂಸ್
ಗದಗ : ಯಡಿಯೂರಪ್ಪ ರಾಜೀನಾಮೆ ಕೊಡುವುದರಿಂದ ಅಥವಾ ಇನ್ನೊಬ್ಬ ಮುಖ್ಯಮಂತ್ರಿ ಬರೋದರಿಂದ ರಾಜ್ಯಕ್ಕೆ ಒಳ್ಳೆದಾಗೋದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಯಡಿಯೂರಪ್ಪ ರಾಜೀನಾಮೆ ನೀಡುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ, ಅವರು ರಾಜೀನಾಮೆ ಕೊಡುವುದರಿಂದ ಅಥವಾ ಇನ್ನೊಬ್ಬ ಮುಖ್ಯಮಂತ್ರಿ ಬರೋದರಿಂದ ರಾಜ್ಯಕ್ಕೆ ಒಳ್ಳೆದಾಗೋದಿಲ್ಲ.
ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಇತ್ತು. ಬಿ.ಎಸ್.ಯಡಿಯೂರಪ್ಪ ಕರ್ನಾಟಕ ಕಂಡ ಭ್ರಷ್ಟ ಸಿಎಂ ಆಗಿದ್ದರು. ಈಗ ಇನ್ನೊಬ್ಬ ಭ್ರಷ್ಟ ಮುಖ್ಯಮಂತ್ರಿ ಬರುತ್ತಾನೆ. ಬಿಜೆಪಿಯೇ ಭ್ರಷ್ಟ ಪಕ್ಷವಾಗಿದೆ. ಬಿಜೆಪಿ ತೊಲಗದಿದ್ದರೆ ಈ ರಾಜ್ಯಕ್ಕೆ ಮುಕ್ತಿ ಸಿಗುವುದಿಲ್ಲ ಎಂದು ಟೀಕಿಸಿದರು.
ಸರ್ಕಾರದ ಭ್ರಷ್ಟಾಚಾರ ಬಯಲು ಮಾಡುವುದು ಕಾಂಗ್ರೆಸ್ ಕೆಲಸ. ಸರ್ಕಾರದ ನಿಷ್ಕ್ರಿಯತೆ ಬಯಲು ಮಾಡುವುದೇ ನಮ್ಮ ಕೆಲಸ ಎಂದು ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಒಲಸಿಗರ ಪರಿಸ್ಥಿತಿ ನನಗೆ ಗೊತ್ತಿಲ್ಲ. ನಮ್ಮ ಪಕ್ಷ ಬಿಟ್ಟು ಬಿಜೆಪಿಗೆ ಹೋದವರಿಗೆ ಜನ ಪಾಠ ಕಲಿಸ್ತಾರೆ ಎಂದು ಗುಡುಗಿದರು.