ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಣೆ: ಬಿಎಸ್ವೈ ಅಪ್ಪಟ ಅಭಿಮಾನಿ ಆತ್ಮಹತ್ಯೆ! ಬಿಎಸ್ವೈ ಸಂತಾಪ | ಜನತಾ ನ್ಯೂಸ್
ಚಾಮರಾಜನಗರ : ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ನೊಂದ ಬಿಎಸ್ವೈ ಅಭಿಮಾನಿ ರವಿ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಇಂತಹ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. ರವಿ (35) ಮೃತ ದುರ್ದೈವಿ. ರವಿ ಹೋಟೆಲ್ನಲ್ಲಿ ಕೆಲಸ ಮಾಡಿಕೊಂಡಿದ್ದ. ಯಡಿಯೂರಪ್ಪನವರ ಅಪ್ಪಟ ಅಭಿಮಾನಿಯಾಗಿದ್ದ ರವಿ, ನಿನ್ನೆ ಸಿಎಂ ಸ್ಥಾನಕ್ಕೆ ಬಿಎಸ್ವೈ ರಾಜೀನಾಮೆ ಕೊಡುತ್ತಿದ್ದಂತೆ ಮಂಕಾಗಿದ್ದ.
ರಾಜೀನಾಮೆ ಘೋಷಣೆಯ ವಿಡಿಯೋವನ್ನು ಪದೇಪದೆ ನೋಡಿದ ರವಿ, ಯಡಿಯೂರಪ್ಪ ಅವರು ಕಣ್ಣೀರು ಸುರಿಸಿದ್ದು ಬೇಸರ ತಂದಿದೆ ಎಂದು ಗ್ರಾಮದ ಗುರುಸ್ವಾಮಿ ಬಳಿ ಹೇಳಿಕೊಂಡಿದ್ದ. ಬೆಳಗ್ಗೆ ಅವನ ಕ್ಯಾಂಟೀನ್ ಬಳಿಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ನನ್ನ ರಾಜೀನಾಮೆಯಿಂದ ಮನನ್ನೊಂದ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ.
ರಾಜಕಾರಣದಲ್ಲಿ ಏರಿಳಿತಗಳು ಸಹಜ, ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು" ಎಂದು ತಿಳಿಸಿದ್ದಾರೆ. ಮತ್ತೊಂದು ಟ್ವೀಟ್ನಲ್ಲಿ ಯಡಿಯೂರಪ್ಪ ಅವರು, ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ. ಇದರಿಂದ ನಿಮ್ಮ ಕುಟುಂಬಕ್ಕಾಗುವ ನಷ್ಟವನ್ನು ಯಾರಿಂದಲೂ ಭರಿಸಲು ಸಾಧ್ಯವಿಲ್ಲ. ರವಿ ಕುಟುಂಬದ ನೋವಿನೊಂದಿಗೆ ನಾನಿರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ