ಜಿ.ಪಂ ಸದಸ್ಯ ಯೋಗೀಶ್ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಷರತ್ತು ಬದ್ಧ ಜಾಮೀನು! | ಜನತಾ ನ್ಯೂಸ್
ಧಾರವಾಡ : ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದ ಆರೋಪಿ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಷರತ್ತು ಬದ್ಧ ರಾಜೀನಾಮೆ ಮಂಜೂರು ಮಾಡಿದೆ.
ವಿನಯ್ ಕುಲಕರ್ಣಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಪೀಠ, ಸಿಬಿಐ ಅಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗಿ ಸಹಕರಿಸಬೇಕು ಎಂಬ ಷರತ್ತನ್ನೂ ವಿಧಿಸಿ ಜಾಮೀನು ಮಂಜೂರು ಮಾಡಿದೆ.
ಕರ್ನಾಟಕದ ಪರ ವಾದಿಸಿದ ವಕೀಲರು, ಆನಂದ್ ಸಿಂಗ್ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ಬಾಕಿ ಇದೆ ಎಂದು ಪೀಠಕ್ಕೆ ತಿಳಿಸಿದರು. ಈ ವೇಳೆ ಹೈಕೋರ್ಟ್ಗೆ ಎರಡು ತಿಂಗಳ ಒಳಗಾಗಿ ಪ್ರಕರಣ ವಿಚಾರಣೆ ನಡೆಸಬೇಕು ಎಂಬುದಾಗಿ ನಿರ್ದೇಶಿಸಿತು.
ಕಳೆದ 9 ತಿಂಗಳಿನಿಂದ ಜೈಲಿನಲ್ಲಿರುವ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದು, ಆದರೆ ಧಾರವಾಡಕ್ಕೆ ಹೋಗದಂತೆ ಸೂಚನೆ ನೀಡಿದೆ. ಅಲ್ಲದೇ ಸಿಬಿಐ ಅಧಿಕಾರಿ ಕರೆದಾಗಲೆಲ್ಲ ವಿಚಾರಣೆಗೆ ಸಹಕರಿಸಬೇಕು ಷರತ್ತು ವಿಧಿಸಿದೆ. ಇನ್ನು ವಿನಯ್ ಸೋದರಮಾವ ಚಂದ್ರಶೇಖರ ಇಂಡಿ ಪರ ವಕೀಲ ಕಾಮತ್ ವಕಾಲತ್ತು ವಹಿಸಿದ್ದರು.
ಈ ಮೂಲಕ ಕಳೆದ ಜು.27ರಿಂದ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಂತ ವಿನಯ್ ಕುಲಕರ್ಣಿಗೆ ಬಿಡುಗಡೆ ದೊರೆತಿದೆ.