ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ: ಸಿಎಂ ಬೊಮ್ಮಾಯಿ | ಜನತಾ ನ್ಯೂಸ್
ಉಡುಪಿ : ಇಂದು ವಲ್ಡ್ ಆರ್ಗನ್ ಡೊನೇಶನ್ ಡೇ. ಇತ್ತೀಚೆಗೆ ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ ಬಂದಿದೆ. ಅಂಗಾಂಗ ದಾನ ಮಾಡುವುದರಿಂದ ಜೀವ ಉಳಿಸಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅಂಗಾಂಗ ದಾನ ಮಾಡಲು ಮುಂದಾಗಿರುವ ಸಿಎಂ ಬಸವರಾಜ ಬೊಮ್ಮಾಯಿ. ಅಂಗಾಂಗ ದಾನದಿಂದ ಸಾವಿರಾರು ಜೀವ ಉಳಿಸಲು ಸಾಧ್ಯ. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ ಎಂದು ಹೇಳಿದರು.
ಹೆಚ್ಚಿನ ಜನ ಅಂಗಾಂಗ ದಾನಕ್ಕೆ ಮುಂದೆ ಬರಬೇಕು. ಇದರಿಂದ ಸಾವಿರಾರು ಜೀವ ಉಳಿಸಲು ಸಾಧ್ಯವಿದೆ. ನಿಮ್ಮಿಂದ ಇನ್ನೊಂದು ಜೀವ ಉಳಿಸಲು ಸಾಧ್ಯವಿದ್ದರೆ ಯಾಕೆ ಮಾಡಬಾರದು. ಎಲ್ಲರೂ ಕೂಡ ಈ ಕುರಿತು ಸಂಕಲ್ಪ ಮಾಡೋಣ. ಕಿಡ್ನಿ, ಹಾರ್ಟ್, ಲಿವರ್ ಇನ್ನೊಬ್ಬರ ಉಪಯೋಗಕ್ಕೆ ಬರಲಿ ಎಂದರು.
RELATED TOPICS:
English summary :Basavaraj bommai