Fri,Apr26,2024
ಕನ್ನಡ / English

ನನ್ನ ಹೋರಾಟ ಅಕ್ರಮ ಗಣಿಗಾರಿಕೆ ವಿರುದ್ಧ ಮಾತ್ರ. ಸಕ್ರಮವಾಗಿ ಇರುವ ಗಣಿಗಾರಿಕೆಗೆ ನನ್ನ ತಕರಾರು ಇಲ್ಲ | ಜನತಾ ನ್ಯೂಸ್

18 Aug 2021
2024

ಮಂಡ್ಯ : ಸುಮಲತಾ ಅವರ ಅಧ್ಯಕ್ಷತೆಯಲ್ಲಿ ಸಭೆ ಆರಂಭವಾಗುತ್ತಿದ್ದಂತೆ ಮಾತು ಆರಂಭಿಸಿದ ಶಾಸಕ ರವೀಂದ್ರ ಶ್ರೀಕಂಠಯ್ಯ, ಕೆಆರ್‍ಎಸ್ ಬಳಿ ಸಭೆ ಕರೆದಿರುವ ಸಂಬಂಧ ಹಾಗೂ ತಮ್ಮ ಆಪ್ತ ಕಾರ್ಯದರ್ಶಿ ಲೆಟರ್‍ಹೆಡ್ ದುರ್ಬಳಕೆ ಮಾಡಿಕೊಂಡಿರುವ ಕುರಿತು ಸ್ಪಷ್ಟನೆ ನೀಡಿ ನಂತರ, ಸಭೆ ನಡೆಸಿ ಎಂದು ಸಂಸದೆ ಸುಮಲತಾ ಅವರನ್ನು ಒತ್ತಾಯಿಸಿದರು.

ಕೆಆರ್‍ಎಸ್ ಅಧಿಕಾರಿಗಳ ಸಭೆ ಕರೆಯುವ ಅಧಿಕಾರ ಸಂಸದರಿಗಿಲ್ಲ. ಆದರೆ, ತಾವು ತಮ್ಮ ವ್ಯಾಪ್ತಿ ಮೀರಿ ಸಭೆ ಕರೆದಿದ್ದೀರಿ. ಅದೂ ಅಲ್ಲದೆ, ನಿಮ್ಮ ಆಪ್ತ ಕಾರ್ಯದರ್ಶಿ ನಿಮ್ಮ ಲೆಟರ್‍ಹೆಡ್‍ನಲ್ಲಿ ಸಭೆ ಕರೆಯಲು ಕಾವೇರಿ ಪ್ರಾಧಿಕಾರದ ಅಧ್ಯಕ್ಷರಿಗೆ ಕೋರಿದ್ದಾರೆ. ನಿಮ್ಮ ಲೆಟರ್‍ಹೆಡ್ ದುರ್ಬಳಕೆ ಆಗುತ್ತಿದೆ ಎಂದು ರವೀಂದ್ರ ಆರೋಪಿಸಿದರು.

ಅಕ್ರಮ ಗಣಿಗಾರಿಕೆ ಬಗ್ಗೆ ಮಾತನಾಡುತ್ತೀರಿ. ಅದರೆ, ನಿಮ್ಮ ಸುತ್ತಮುತ್ತ ಅಕ್ರಮ ವ್ಯಕ್ತಿಗಳೇ ತುಂಬಿದ್ದಾರೆ. ನಿಮ್ಮ ಲೆಟರ್‍ಹೆಡ್ ದುರ್ಬಳಕೆ ಆಗುತ್ತಿದೆ. ಇದಕ್ಕೆ ಉತ್ತರ ಕೊಡಬೇಕು. ಜತೆಗೆ ಜಿಲ್ಲೆಯಲ್ಲಿ ನೀವು ಯಾವ ಅಭಿವೃದ್ಧಿ ಕೆಲಸ ಮಾಡಿದ್ದೀರಿ ಎಂಬುದನ್ನು ತಿಳಿಸಬೇಕು ಎಂದು ರವೀಂದ್ರ ಅವರು ಪಟ್ಟುಹಿಡಿದರು. ಇದಕ್ಕೆ ಸುರೇಶ್‍ಗೌಡ ಸೇರಿದಂತೆ ಜೆಡಿಎಸ್ ಶಾಸಕರು ದನಿಗೂಡಿಸಿದರು.

ಕೋವಿಡ್ ವಿಷಯದಲ್ಲಿ ಆಕ್ಸಿಜನ್ ಸಿಲಿಂಡರ್ ಕೊಡುಗೆ ಬಿಟ್ಟರೆ ನಿಮ್ಮಿಂದ ಬೇರೆ ಯಾವ ನೆರವು ಬಂದಿಲ್ಲ. ಎರಡೂವರೆ ವರ್ಷದಲ್ಲಿ ಒಂದು ಸಣ್ಣ ಮೋರಿ ಕಾಮಗಾರಿಯನ್ನು ಮಾಡಿಸಿಲ್ಲ. ಕೇವಲ ಪ್ರಚಾರ ಮಾಡುತ್ತಾ ಜನರನ್ನು ದಿಕ್ಕುತಪ್ಪಿಸುತ್ತೀದ್ದೀರಿ ಎಂದು ಅವರು ಟೀಕಸಿದರು.

ಸಂಸದೆಯಾಗಿ ಸಭೆಯನ್ನು ನಡೆಸುತ್ತಿದ್ದೇನೆ. ನಿಮ್ಮ ಪ್ರಶ್ನೆಗೆ ಉತ್ತರ ಕೊಡುವ ಅಗತ್ಯವಿಲ್ಲ. ನೀವು ಬೇಕಾದರೆ ಸಂಬಂಧಿಸಿದವರನ್ನು ಕೇಳಿ ಸ್ಪಷ್ಟನೆ ಪಡೆದುಕೊಳ್ಳಿ. ಇದು ರಾಜಕೀಯ ಸಭೆ ಅಲ್ಲ. ಲೆಟರ್‍ಹೆಡ್ ದುರ್ಬಳಕೆಯಾಗಿದ್ದರೆ ದೂರ ಕೊಡಿ. ಸುಮ್ಮನೆ ಸಭೆಗೆ ಅಡ್ಡಪಡಿಸುವುದು ಸರಿಯಲ್ಲ ಎಂದು ಸಂಸದೆ ಸುಮಲತಾ ಎದುರೇಟು ನೀಡಿದರು.

ಸುಮಲತಾ ಅಂಬರೀಶ್, ಸಭೆಯಲ್ಲಿ ಗಂಭೀರವಾದ ವಿಷಯದ ಬಗ್ಗೆ ಚರ್ಚೆ ಆಗುತ್ತಿದೆ. ಕೆಲವೊಂದು ಹೇಳಿಕೆಗಳಿಂದ ಪರ್ಸನಲ್ ಆಗುವುದು ಬೇಡ. ನನ್ನ ಹೋರಾಟ ಅಕ್ರಮ ಗಣಿಗಾರಿಕೆ ವಿರುದ್ಧ ಮಾತ್ರ. ಸಕ್ರಮವಾಗಿ ಇರುವ ಗಣಿಗಾರಿಕೆಗೆ ನನ್ನ ತಕರಾರು ಇಲ್ಲ. ಸಕ್ರಮವಾಗಿ ಇರುವ ಗಣಿಗಾರಿಕೆ ನಡೆದುಕೊಂಡು ಹೋಗಲಿ. ಸಕ್ರಮವಾಗಿ ಇರುವುದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಅಕ್ರಮ ಗಣಿಗಾರಿಕೆ ಮಾಡುವವರ ವಿರುದ್ಧ ಕ್ರಮ ಜರುಗಿಸಿಲ್ಲ. ಯಾರೊಬ್ಬರನ್ನೂ ಜೈಲಿಗೆ ಕಳುಹಿಸುವ ಕೆಲಸವಾಗಿಲ್ಲ ಎಂದು ಗಣಿ ಅಧಿಕಾರಿ ಪದ್ಮಜ ವಿರುದ್ಧ ಸಂಸದೆ ಸುಮಲತಾ, ಶಾಸಕರು ಗರಂ ಆಗಿದ್ದಾರೆ. ಅಕ್ರಮ ಗಣಿಗಾರಿಕೆಯ ವಿರುದ್ಧ ಏನು ಕ್ರಮ ಆಗಿದೆ. ಯಾವುದೇ ಸಭೆಯಲ್ಲೂ ಈ ಬಗ್ಗೆ ಮಾಹಿತಿ ನೀಡಿಲ್ಲ. ಸರಿಯಾದ ಮಾಹಿತಿ ತೆಗೆದುಕೊಂಡು ಏಕೆ ಸಭೆಗೆ ಬರಲ್ಲ ಎಂದು ಅಧಿಕಾರಿ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ಗರಂ ಆಗಿದ್ದಾರೆ.

ಒಂದು ಸಾವಿರ ರೂಪಾಯಿ ಎಲೆಕ್ಟ್ರಿಕ್ ಬಿಲ್ ಕಟ್ಟಿಲ್ಲ ಅಂದರೆ ಬಿಡಲ್ಲ. ಗಣಿಯಲ್ಲಿ ನೂರಾರು ಕೋಟಿ ಕಟ್ಟಿಲ್ಲ ಎಂದರೆ ಏಕೆ ಬಿಡ್ತೀರಿ? ಸರ್ಕಾರದ ಹಣವನ್ನು ನೀವು ಏಕೆ ವಸೂಲಿ‌ ಮಾಡುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಸಂಸದೆ ಸುಮಲತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಿಶಾ ಸಭೆಗೆ ಸಂಸದರು ಅಧ್ಯಕ್ಷರಾಗಿರುತ್ತಾರೆ. ಸಂಸದರು ಸಭೆ ಕರೆಯುವಂತೆ ಕೇಳಿದಾಗ ನಾನು ಸಭೆ ಕರೆದಿದ್ದೇನೆ. ಕೋವಿಡ್ ಹಿನ್ನೆಲೆಯಲ್ಲಿ ಪ್ರಗತಿ ಪರಿಶೀಲನೆಗೆ ಕೇಂದ್ರ ಸೂಚಿಸಿದೆ. ಹೀಗಾಗಿ ಸಭೆ ಕರೆದಿದ್ದೇನೆ ಎಂದು ಸಿಇಓ ದಿವ್ಯಪ್ರಭು ಸ್ಪಷ್ಟಪಡಿಸಿದರು.

ಸಂಸದೆ ಸುಮಲತಾ ಅವರು ಅಕ್ರಮ ಗಣಿಗಾರಿಕೆ ವಿರುದ್ಧ ಧನಿ ಎತ್ತಿದ ಹಿನ್ನೆಲೆಯಲ್ಲಿ ಅಕ್ರಮ ಸೇರಿದಂತೆ ಸಕ್ರಮ ಗಣಿಗಾರಿಕೆಯನ್ನೂ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪದ್ಮಜಾ ಸ್ಥಗಿತಗೊಳಿಸಿದ್ದಾರೆ. ಇದರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ತೊಂದರೆಯಾಗಿದೆ ಎಂದು ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸಿ.ಎಸ್.ಪುಟ್ಟರಾಜು, ಕೆ.ಸುರೇಶ್‍ಗೌಡ ಕಿಡಿಕಾರಿದರು.

ಶಾಸಕ ಎಂ.ಶ್ರೀನಿವಾಸ್, ವಿಧಾನಪರಿಷತ್ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಎನ್.ಅಪ್ಪಾಜಿಗೌಡ, ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

RELATED TOPICS:
English summary :Sumalatha Ambarish

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...