ಜಮೀನಿಗೆ ನೀರು ಹಾಯಿಸಲು ತೆರಳಿದ್ದ ಸಹೋದರರು ವಿದ್ಯುತ್ ಶಾಕ್ ತಗುಲಿ ದಾರುಣ ಸಾವು | ಜನತಾ ನ್ಯೂಸ್
ಬೆಳಗಾವಿ : ನೀರು ಹಾಯಿಸಲು ಬಾವಿಯ ಮೋಟರ್ ಸ್ಟಾರ್ಟ್ ಮಾಡಲು ಹೋಗಿ ಸಹೋದರಿಬ್ಬರು ಸಾವಿಗೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಲಜಿ ಗ್ರಾಮದ ಬಡಿಗೇರ ತೋಟದಲ್ಲಿ ನಡೆದಿದೆ.
ರಾಜು ಬಾಳಪ್ಪ ಬಡಿಗೇರ (25) ಹಾಗೂ ಶಂಕರ್ ರಾಮಪ್ಪ ಬಡಿಗೇರ (26) ಮೃತ ಸಹೋದರರು. ಬೆಳಗ್ಗೆ ಹೊಲಕ್ಕೆ ನೀರು ಹಾಯಿಸಲು ಬಾವಿಯ ಮೋಟರ್ ಪ್ರಾರಂಭಿಸುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಸಹೋದರರು ಸಾವಿಗೀಡಾಗಿದ್ದಾರೆ.
ಸ್ಥಳಕ್ಕೆ ಕುಡಚಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಕುರಿತು ಕುಡಚಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :Belagavi