ಪೋಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂಸ್
ಹಾವೇರಿ : ಪೋಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಪೋಷಕರು ಒಂದನೇ ತರಗತಿಗಳಿಂದಲೇ ಶಾಲೆ ಆರಂಭ ಮಾಡುವಂತೆ ಹೇಳುತ್ತಿದ್ದಾರೆ. ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭಿಸುವಂತೆ ಹೇಳುತ್ತಿದ್ದಾರೆ ಎಂದಿದ್ದಾರೆ.
ಪೂರ್ಣ ಪ್ರಮಾಣದ ಶಾಲೆ ಆರಂಭಿಸಿ. ಆನ್ ಲೈನ್ ಕ್ಲಾಸ್ ನಿಂದ ನಮಗೆ ಸರಿಯಾದ ಶಿಕ್ಷಣ ಸಿಗುತ್ತಿಲ್ಲ ಎಂದು ವಿದ್ಯಾರ್ಥಿಗಳೂ ಹೇಳಿದ್ದಾರೆ. ಒಂದು ವಾರ ಅಥವಾ 10 ದಿನ ಕಾದು ನೋಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.
ಕಳೆದ 23 ನೇ ತಾರೀಖಿನಿಂದ ಶಾಲೆ ಪ್ರಾರಂಭಿಸಿದ್ದೇವೆ. ತುಂಬಾ ಒಳ್ಳೆಯ ರೆಸ್ಪಾನ್ಸ್ ನಮಗೆ ಸಿಕ್ಕಿದೆ. 6,7,8 ನೇ ತರಗತಿ ಸೆ.6ರಿಂದ ಪ್ರಾರಂಭವಾಗುತ್ತವೆ. ಪೋಷಕರು ಶಾಲೆಗಳಿಗೆ ಬಂದು ಒಂದನೇ ತರಗತಿಯಿಂದಲೇ ಶಾಲೆ ಪ್ರಾರಂಭಿಸಿ ಎಂದು ಹೇಳಿದ್ದಾರೆ. ಮಕ್ಕಳ ಇಚ್ಚೆ ನೋಡಿಕೊಂಡೇ ಮುಂದಿನ ದಿನಗಳಲ್ಲಿ 1 ರಿಂದ 5ರವರಗೆ ಶಾಲೆ ಆರಂಭ ಮಾಡುತ್ತೇವೆ ಎಂದರು.
ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿದಷ್ಟು, ಅವರ ಆರೋಗ್ಯಕ್ಕೂ ಒತ್ತು ನೀಡುತ್ತೇವೆ. ಸರ್ಕಾರದ ವ್ಯವಸ್ಥೆ ಮೀರಿ ಕೆಲಸ ಮಾಡಿದ ಶಿಕ್ಷಕರು ನಮ್ಮಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಮಕ್ಕಳ ಇಚ್ಛೆಯಂತೆ ಒಂದರಿಂದ ಐದನೇ ತರಗತಿವರೆಗೆ ಶಾಲೆ ಆರಂಭ ಮಾಡುವ ಬಗ್ಗೆ ಚಿಂತನೆ. ಎಲ್ಲ ಶಾಲೆಗಳಿಗೂ ಕುಡಿಯೋ ನೀರಿನ ವ್ಯವಸ್ಥೆ ಮಾಡಿದ್ದೇವೆ ಎಂದರು.