ಕಾಲು ಜಾರಿ ಕೋರೆ ಗುಂಡಿಗೆ ಬಿದ್ದು ಬಾಲಕ ಸಾವು! | ಜನತಾ ನ್ಯೂಸ್
ಬಂಟ್ವಾಳ : ಕೆಂಪು ಕಲ್ಲಿನ ಕೋರೆಗೆ ಬಿದ್ದು ವಿದ್ಯಾರ್ಥಿಯೊರ್ವ ಮೃತಪಟ್ಟ ಘಟನೆ ನಡೆದಿದೆ.
ಬಂಟ್ವಾಳ ಕಸ್ಬಾ ಗ್ರಾಮದ ಬಾರೆಕಾಡ್ ಕ್ವಾಟ್ರಸ್ ನಿವಾಸಿ ಮುಹಮ್ಮದ್ ಸಾದಿಕ್ ಅವರ ಪುತ್ರ ಮುಹಮ್ಮದ್ ಸೌಹಾದ್ (11) ಮೃತ ಬಾಲಕ. ಸುತ್ತ ಬೇಲಿ ಹಾಕಲಾಗಿದ್ದ ಈ ಕೆಂಪು ಕಲ್ಲಿನ ಕೋರೆಯಲ್ಲಿ ಮಳೆಯಿಂದಾಗಿ ನೀರು ತುಂಬಿತ್ತೆನ್ನಲಾಗಿದೆ.
ಇಬ್ಬರು ಸ್ನೇಹಿತರ ಜೊತೆ ಆಟವಾಡಲೆಂದು ಇಳಿದಾಗ ಸೌಹಾದ್ ಆಯತಪ್ಪಿ ನೀರಿಗೆ ಬಿದ್ದಿದ್ದಾನೆ. ಆಟ ಆಡುತ್ತಿದ್ದ ಬಾಲಕ ಕಾಲು ಜಾರಿ ನೀರಿಗೆ ಬಿದ್ದ ಕೂಡಲೇ ಉಳಿದ ಮಕ್ಕಳು ಮನೆಯವರಿಗೆ ತಿಳಿಸಿದ್ದು ಕೂಡಲೇ ಸ್ಥಳಕ್ಕೆ ಬಂದು ನೀರಿನಲ್ಲಿ ಬಿದ್ದಿದ್ದ ಬಾಲಕನನ್ನು ಖಾಸಗಿ ಆಸ್ಪತ್ರೆ ಗೆ ದಾಖಲು ಮಾಡಿದ್ದಾರೆ.
ಆದರೆ ಅದಾಗಲೇ ಬಾಲಕ ಮೃತಪಟ್ಟ ಬಗ್ಗೆ ವೈದ್ಯಾಧಿಕಾರಿ ಗಳು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಬಂಟ್ವಾಳ ನಗರ ಪೋಲೀಸ್ ಠಾಣಾ ಎಸ್ ಐ.ಅವಿನಾಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.