ಪಾಲಿಕೆ ಚುನಾವಣೆಯಲ್ಲಿ ನಮಗೆ ಪ್ರಥಮ ಸೂಚನೆ ಸಿಕ್ಕಿದೆ: ಸಿಎಂ ಬೊಮ್ಮಾಯಿ ಹರ್ಷ | ಜನತಾ ನ್ಯೂಸ್
ಬೆಂಗಳೂರು : ಮೂರು ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಕುರಿತು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ಹರ್ಷ ವ್ಯಕ್ತಪಡಿಸಿದ್ದಾರೆ.
ನಮ್ಮ ಸರ್ಕಾರ ಬಂದು ಒಂದು ತಿಂಗಳಿನಲ್ಲಿ ನಡೆದ ಚುನಾವಣೆಯಲ್ಲಿ ಪ್ರಥಮ ಸೂಚನೆ ಸಿಕ್ಕಿದೆ. ಆ ಮೂಲಕ ಜನರ ನಮಗೆ ಮನ್ನಣೆ ಕೊಡುತ್ತಿದ್ದಾರೆ. ಜೊತೆಗೆ ಬೆಂಬಲ ಕೊಡುತ್ತಿದ್ದಾರೆ. ಇದು ಮುಂದಿನ ದಿನಗಳಲ್ಲಿ ದಿಕ್ಸೂಚಿಯಾಗಲಿದೆ ಎಂದರು.
ಇನ್ನು ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗುವ ಸಾಧ್ಯತೆ ಇದ್ದು, ಕಲಬುರಗಿಯಲ್ಲೂ ಸ್ಪಷ್ಟ ಬಹುಮತ ಸಿಗುವ ನಿರೀಕ್ಷೆ ಇದೆ. ಮೂರು ಪಾಲಿಕೆಗಳಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು. ಚುನಾವಣಾ ವೇಳೆ ಶ್ರಮಿಸಿದ ಮಂತ್ರಿಗಳು, ಶಾಸಕರು ಸೇರಿದಂತೆ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಅಲ್ಲದೇ, ಬಿಜೆಪಿಗೆ ಮನ್ನಣೆ ನೀಡಿದ ಮತದಾರರಿಗೂ ಶುಭ ಕೋರಿದರು.
ಚುನಾವಣೆ ಜವಾಬ್ದಾರಿ ಹೊತ್ತಿದ್ದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಅರುಣ್ ಕುಮಾರ್ ಮತ್ತು ರವಿಕುಮಾರ್ ಗೆ ಅಭಿನಂದನೆಗಳು, ಬಿಜೆಪಿ ಮೇಲೆ ವಿಶ್ವಾಸ ತೋರಿದ ಮತದಾರರಿಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.