ರಾಜ್ಯದಲ್ಲಿ ಬಿಜೆಪಿ ಅಲೆ ಇದೆ ಎನ್ನುವುದು ಮತ್ತೆ ಖಚಿತವಾಗಿದೆ: ನಳಿನ್ ಕುಮಾರ್ ಕಟೀಲ್ | ಜನತಾ ನ್ಯೂಸ್
ಬೆಂಗಳೂರು : ಹುಬ್ಬಳ್ಳಿ ಧಾರವಾಡ, ಬೆಳಗಾವಿ, ಕಲಬುರಗಿ ಮೂರು ನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.
ಪಾಲಿಕೆ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನ ಬಿಜೆಪಿ ಪಡೆದುಕೊಂಡಿದೆ. ಎಲ್ಲ ಮತದಾರರಿಗೂ ಬಿಜೆಪಿ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ಯಡಿಯೂರಪ್ಪ ಮಾರ್ಗದರ್ಶನ, ಬೊಮ್ಮಯಿ ನಾಯಕತ್ವದಲ್ಲಿ ನಾವು ಚುನಾವಣೆ ಎದುರಿಸಿದ್ದೇವೆ. ಬೆಳಗಾವಿಯಲ್ಲಿ ಬಿಜೆಪಿ ಅಭೂತಪೂರ್ವ ಜಯಭೇರಿ ಬಾರಿಸಿದೆ. ಬೆಳಗಾವಿಯಲ್ಲಿ ಚಿಹ್ನೆ ಅಡಿ ಮೊದಲ ಬಾರಿ ಚುನಾವಣೆ ಎದುರಿಸಿದ್ದೆವು. ಬಿಜೆಪಿಯ ಆಡಳಿತ ಮೆಚ್ಚಿ ಬೆಳಗಾವಿಯಲ್ಲಿ ಜನರು ಗೆಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.
25 ವರ್ಷಗಳ ಹಿನ್ನೆಲೆ ನೋಡಿದಾಗ ಬೆಳಗಾವಿಯಲ್ಲಿ ಪಾರ್ಟಿ ಹೆಸರಲ್ಲಿ ಸ್ಪರ್ಧೆ ಮಾಡಿರಲಿಲ್ಲ. ಈಗ ಪಕ್ಷದ ಚಿನ್ಹೆಯಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದೇವು, ಗೆಲುವು ಸಿಕ್ಕಿದೆ. ಮೂರು ನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ನಡೆಸಲಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಚುನಾವಣೆ ಕಣಕ್ಕೆ ಬರಲಿಲ್ಲ, ಡಿ ಕೆ ಶಿವಕುಮಾರ್ ವಿಫಲ ಅಧ್ಯಕ್ಷರು ಅಂತ ತೋರಿಸಲು ಬರಲಿಲ್ಲ. ಅವರು ಸಿಎಂ ಸ್ಥಾನಕ್ಕಾಗಿ ಕಿತ್ತಾಟ ನಡೆಸುತ್ತಿದ್ದಾರೆ. ಹೀಗಾಗಿ ಡಿ ಕೆ ಶಿವಕುಮಾರ್ ವಿಫಲ ರಾಜ್ಯಾಧ್ಯಕ್ಷ ಎಂದು ತೋರಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಒಳ ಜಗಳ ಬಯಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ವ್ಯಂಗ್ಯ ಮಾಡಿದ್ದಾರೆ.