ದೊಣ್ಣೆಯಿಂದ ಹೊಡೆದು ತಂದೆಯನ್ನು ಕೊಂದ ಮಗ | ಜನತಾ ನ್ಯೂಸ್
ಶಿವಮೊಗ್ಗ : ಕುಡಿದ ಮತ್ತಿನಲ್ಲಿ ತಂದೆಯನ್ನು ಮಗನೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಂಡೇನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದವರನ್ನು ಕುಮಾರ ನಾಯ್ಕ (55) ಎಂದು ಗುರುತಿಸಲಾಗಿದೆ. ಇವರನ್ನು ಮಗ ಮಧು (28) ಕೊಲೆ ಮಾಡಿದ್ದಾನೆ
ತಂದೆ-ಮಗ ಇಬ್ಬರು ನಿನ್ನೆ ರಾತ್ರಿ ಕುಡಿದು ಜಗಳವಾಡಿದ್ದಾರೆ. ಈ ವೇಳೆ ಮಧುನಾಯ್ಕ ಅಲ್ಲೇ ಇದ್ದ ದೊಣ್ಣೆಯಿಂದ ತಂದೆಗೆ ಹೊಡೆದಿದ್ದಾನೆ. ಈ ವೇಳೆಗೆ ಕುಮಾರ ನಾಯ್ಕನ ಕಿವಿಯಲ್ಲಿ ರಕ್ತ ಬಂದಿದೆ. ಗಾಯಗೊಂಡಿದ್ದರೂ ಮನೆಯಿಂದ ಹೊರಗೆ ಹೋಗಿದ್ದಾನೆ. ತಡರಾತ್ರಿ ಮನೆಗೆ ವಾಪಸ್ಸಾಗಿ ಮನೆಯ ಜಗುಲಿ ಮೇಲೆ ಮಲಗಿಕೊಂಡಿದ್ದ. ಮಲಗಿದ್ದಲ್ಲಿಯೇ ಪ್ರಾಣ ಬಿಟ್ಟಿದ್ದಾನೆ. ಬೆಳಗ್ಗೆ ಮನೆ ಮುಂದೆ ನೋಡಿದಾಗ ಆತನ ಶವ ಪತ್ತೆಯಾಗಿದೆ.
ತುಂಗಾ ನಗರ ಪೊಲೀಸರು ಮಧುನಾಯ್ಕನನ್ನು ಬಂಧಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.