ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ! | ಜನತಾ ನ್ಯೂಸ್
ಚಾಮರಾಜನಗರ : ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 6.25 ಲಕ್ಷ ರೂಪಾಯಿ ದಂಡ ವಿಧಿಸಿ ಚಾಮರಾಜನಗರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಈ ಕೃತ್ಯಕ್ಕೆ ಸಹಕರಿಸಿದ ಮತ್ತೊಬ್ಬ ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡವವನ್ನು ವಿಧಿಸಲಾಗಿದ್ದು, ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 7.5 ಲಕ್ಷ ರೂಪಾಯಿ ಪರಿಹಾರ ರೂಪದಲ್ಲಿ ನೀಡಬೇಕೆಂದು ನ್ಯಾಯಾಲಯ ಆದೇಶಿಸಿದೆ.
ಚಾಮರಾಜನಗರದ ಮೇಗಲ ಉಪ್ಪಾರ ಬೀದಿಯ ಚಂದ್ರು ಅಲಿಯಾಸ್ ಚಂದ್ರಶೇಖರ್ ಹಾಗೂ ಕೋಡಿಮೋಳೆ ಗ್ರಾಮದ ಮಹದೇವಮ್ಮ ಎಂಬಾಕೆ ಕಠಿಣ ಶಿಕ್ಷೆಗೆರೆ ಗುರಿಯಾದ ಆರೋಪಿಗಳಾಗಿದ್ದಾರೆ.
ಶಾಲೆಗೆ ತೆರಳುತ್ತಿದ್ದಾಗ ಅಪ್ರಾಪ್ತ ಬಾಕಿಯನ್ನು ಬಲವಂತವಾಗಿ ಕರೆದೊಯ್ದು ಸಂಬಂಧಿಕರ ಮನೆಯಲ್ಲಿರಿಸಿದ್ದ ಆರೋಪಿ.
ಸಂಬಂಧಿಕರ ಮನೆಯಲ್ಲಿದ್ದಾಗ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಾಲಕಿ ತಾಯಿಯ ದೂರಿನ ಮೇರೆಗೆ ಚಾಮರಾಜನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಚಂದ್ರಶೇಖರ್ಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಲಾಗಿದೆ. ಅಪ್ರಾಪ್ತ ಬಾಲಕಿಯನ್ನು ಮನೆಯಲ್ಲಿರಿಸಿಕೊಂಡು ಸಹಕರಿಸಿದ್ದ ಸಂಬಂಧಿಗು ಶಿಕ್ಷೆ ನೀಡಲಾಗಿದೆ.
ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾಶಿವ ಎಸ್ ಸುಲ್ತಾನ್ ಪುರಿ ಅವರು ಆರೋಪಿಗಳ ಮೇಲಿನ ಆರೋಪ ಸಾಕ್ಷ್ಯಾಧಾರ ಹಾಗು ವೈದ್ಯಕೀಯ ಪರೀಕ್ಷಾ ವರದಿಗಳಿಂದ ಸಾಭೀತಾದ ಕಾರಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.