ಭೀಕರ ಸರಣಿ ಅಪಘಾತ, ತಂದೆ, ಮಗಳು ಸೇರಿ ಮೂವರ ದಾರುಣ ಸಾವು, ನಾಲ್ವರು ಗಂಭೀರ | ಜನತಾ ನ್ಯೂಸ್
ಕೋಲಾರ : ಕೆಎಸ್ಆರ್ಟಿಸಿ ಬಸ್, ಟಾಟಾ ಏಸ್ ವಾಹನ ಹಾಗೂ ದ್ವಚಕ್ರ ವಾಹನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ತಂದೆ ಮಗಳು ಸೇರಿ ಮೂವರು ಮೃತಪಟ್ಟಿದ್ದು, ನಾಲ್ಕು ಮಂದಿಗೆ ಗಂಭೀರ ಗಾಯವಾಗಿದೆ.
ಮೊದಲು ಟಾಟಾಏಸ್ ಮತ್ತು ಸರ್ಕಾರಿ ಬಸ್ ಮಧ್ಯೆ ಡಿಕ್ಕಿ ಸಂಭವಿಸಿದೆ. ಅದಾದ ಬಳಿಕ ನಿಯಂತ್ರಣ ತಪ್ಪಿದ ಬಸ್, ಎದುರುಗಡೆಯಿಂದ ಬರುತ್ತಿದ್ದ ಬೈಕ್ ಹಾಗೂ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ನಲ್ಲಿದ್ದ ತಂದೆ ಮಗಳು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಮೃತರನ್ನು ಕೋಲಾರ ಹೊರವಲಯದ ಕೋಗೊಲುಹಳ್ಳಿ ನಿವಾಸಿಗಳಾದ ರಾಜು (46), ಮಗಳು ಬಿಂದು(7) ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕ ಸೇರಿ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಕೋಲಾರದ ಎಸ್.ಎನ್.ಆರ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಪ್ತಿಯಲ್ಲಿ ಪ್ರಕರಣ ನಡೆದಿದೆ.