ಬೆಳಗಾವಿಯಲ್ಲಿ ಕೊಳವೆ ಬಾವಿಗೆ ಬಿದ್ದ ಕಂದಮ್ಮ : ರಕ್ಷಣಾ ಕಾರ್ಯಾಚರಣೆ ಆರಂಭ | ಜನತಾ ನ್ಯೂಸ್
ಬೆಳಗಾವಿ : ಎರಡೂವರೆ ವರ್ಷದ ಮಗುವೊಂದು ಬೋರ್ವೆಲ್ಗೆ ಬಿದ್ದಿರುವ ಕರುಣಾಜನಕ ಘಟನೆಯೊಂದು ವರದಿಯಾಗಿದೆ.
ಶರತ್ ಹಸಿರೆ ಎಂಬ ಎರಡೂವರೆ ವರ್ಷದ ಮಗುವೇ ಬೋರ್ವೆಲ್ಗೆ ಬಿದ್ದ ದುರ್ದೈವಿ. ಬಾಲಕ ಶರತ್ ಹಸಿವೆ 15 ಅಡಿ ಆಳದ ಬೋರ್ ವೆಲ್ ನಲ್ಲಿ ಬಿದ್ದಿದ್ದು, ಬಾಲಕನನ್ನು ಸುರಕ್ಷಿತವಾಗಿ ಹೊರಕ್ಕೆ ತೆಗೆಯಲು ಕಾರ್ಯಾಚರಣೆ ಆರಂಭವಾಗಿದೆ .
ಮಗು ನಾಪತ್ತೆಯಾಗಿತ್ತು. ಕುಟುಂಬದವರು ಮಗುವಿಗಾಗಿ ಎಲ್ಲೆಡೆ ಹುಡುಕಾಡಿದ್ದಾರೆ. ಆದರೆ ಎಲ್ಲೂ ಪತ್ತೆಯಾಗಿರಲಿಲ್ಲ. ಮನೆಯಿಂದ 200 ಮೀ. ದೂರದಲ್ಲಿ ಕೊರೆಸಿದ್ದ ಬೋರ್ವೆಲ್ಗೆ ಮಗು ಶರತ್ ಬಿದ್ದಿರುವುದು ತಿಳಿದುಬಂದಿದೆ.
ಹಾಲಪ್ಪ ಎಂಬುವವರ ತೋಟದ ನಿವಾಸದಲ್ಲಿ ಆಡುತ್ತಿದ್ದಾಗ ಬಾಲಕ ಕಾಣೆಯಾಗಿದ್ದನು. ಈ ಕುರಿತು ಹಾರೂಗೇರಿ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದದರು. ನಂತರ ಹೊಲದಲ್ಲಿ ಬೋರ್ ವೆಲ್ ಬಾಲಕ ಬಿದ್ದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸದ್ಯ ರಕ್ಷಣಾ ಕಾರ್ಯ ಆರಂಭವಾಗಿದ್ದು, 15 ಅಡಿ ಆಳದಲ್ಲಿ ಸಿಲುಕಿರುವ ಕಂದಮ್ಮನ ರಕ್ಷಣೆಗೆ ಅಗ್ನಿಶಾಮಕ ದಳ, ಎನ್ ಡಿ ಆರ್ ಎಫ್ ಸಿಬ್ಬಂದಿ ಭೇಟಿ ನೀಡಿದ್ದು, ಬಾಲಕನ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.