ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂಸ್
ದೊಡ್ಡಬಳ್ಳಾಪುರ: : ವಿಚ್ಛೇದನದ ನಂತರ ಪತ್ನಿಗೆ ಜೀವನಾಂಶದ ಹಣ ನೀಡಲಾಗದೇ ಜೈಲಿಗೆ ಹೋಗುವ ಭಯದಿಂದ ಪತಿಯೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ಅಮೀರ್ (30) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮೃತ ಅಮೀರ್ ಶಿಡ್ಲಘಟ್ಟ ಮೂಲದ ನೂರ್ ಜಾನ್ ಜೊತೆ ವಿವಾಹವಾಗಿದ್ದ. ದಾಂಪತ್ಯ ಕಲಹದಿಂದ ವಿಚ್ಚೇದನ ಪಡೆದು ಪತಿ - ಪತ್ನಿ ದೂರವಾಗಿದ್ದರು. ಇನ್ನು ದೂರವಾದ ಪತ್ನಿಗೆ ಜೀವನಾಂಶ ನೀಡಬೇಕು ಎಂದು ನ್ಯಾಯಾಲಯ ಆದೇಶ ನೀಡಿತ್ತು.
ವಿಚ್ಛೇದನ ಪಡೆದ ಅಮೀರ್ ಪತ್ನಿಗೆ ಜೀವನಾಂಶವಾಗಿ ಒಂದು ಲಕ್ಷ ರೂ. ಕೊಡಬೇಕಾಗಿತ್ತು. ಆದರೆ ಅಮೀರ್ ಗೆ 1 ಲಕ್ಷ ಹಣ ಹೊಂದಿಸಲಾಗಲಿಲ್ಲ.
ಇದರಿಂದ ಜೀವನಾಂಶದ ಹಣ ಕೊಡದಿದ್ದರೆ ಜೈಲಿಗೆ ಹೋಗುವ ಭೀತಿ ಕಾಡಿದ್ದು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಮೀರ್ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಅಮೀರ್ ಸಾವನ್ನಪ್ಪಿದ್ದಾನೆ.
ಸದ್ಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ