ಧಾರವಾಡ ಮಂದಿಯ ನಿದ್ದೆಗೆಡಿಸಿದ್ದ ಚಿರತೆ ಸೆರೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು! | ಜನತಾ ನ್ಯೂಸ್
ಧಾರವಾಡ : ಕಳೆದ ಕೆಲ ದಿನಗಳಿಂದ ತಾಲೂಕಿನ ಕವಲಗೇರಿ ಗ್ರಾಮದ ಜಮೀನಿನಲ್ಲಿ ಬೀಡು ಬಿಟ್ಟಿದ್ದ ಚಿರತೆ ಕೊನೆಗೂ ಸೆರೆಯಾಗಿದೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ತಾಲೂಕಿನ ಕವಲಗೇರಿ ಗ್ರಾಮ ವ್ಯಾಪ್ತಿಯ ಕಬ್ಬಿನ ಗದ್ದೆಗಳಲ್ಲಿ ಚಿರತೆ ವಾಸವಾಗಿತ್ತು. ಗ್ರಾಮದ ರೈತರು ಸಾಕಷ್ಟು ಪ್ರಮಾಣದಲ್ಲಿ ಕಬ್ಬು ಬೆಳೆದಿದ್ದು, ಅದು ಎತ್ತರವಾಗಿ, ದಟ್ಟವಾಗಿ ಬೆಳೆದಿದ್ದರಿಂದ ಚಿರತೆ ಅಡಗಿಕೊಳ್ಳಲು ಸಹಾಯಕವಾಗಿತ್ತು.
ಅರಣ್ಯ ಇಲಾಖೆಯ ಡಿಎಪ್ಓ ನೇತೃತ್ವದಲ್ಲಿ ಸುಮಾರು 60 ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿ, ಅಧಿಕಾರಿಗಳು ಚಿರತೆ ಕಾರ್ಯಾಚರಣೆಯನ್ನು ನಿರಂತರವಾಗಿ ಮತ್ತು ತೀವ್ರವಾಗಿ ಮಾಡುತ್ತಿದ್ದರು.
ಕವಲಗೇರಿ ಗ್ರಾಮದ ಕಬ್ಬಿನಗದ್ದೆಗಳ ಮಧ್ಯ ಹಾಗೂ ಸುತ್ತಲೂ ಸುಮಾರು 6ಕ್ಕೂ ಹೆಚ್ಚು ಬೋನ್ ಗಳನ್ನು ಮಾಂಸದೊಂದಿಗೆ ಇಟ್ಟಿದ್ದರು. ಬಹುಶಃ ನಿನ್ನ ತಡ ರಾತ್ರಿ ಅಥವಾ ಬೆಳಗಿನ ಜಾವ ಚಿರತೆ ಬೋನಿನಲ್ಲಿರುವ ಮಾಂಸ ತಿನ್ನಲು ಬಂದು ಸಿಕ್ಕಿ ಹಾಕಿಕೊಂಡಿದೆ.
ಆ ಚಿರತೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಹರಸಾಹಸ ಪಡುತ್ತಿದ್ದರು. ಇದೀಗ ಅರಣ್ಯ ಇಲಾಖೆ ಸಿಬ್ಬಂದಿಯ ಚಿರತೆ ಸೆರೆ ಕಾರ್ಯಾಚರಣೆ ಯಶಸ್ವಿಯಾಗಿದೆ.