ನೀರೆಂದು ಪೆಟ್ರೋಲ್ ಕುಡಿದ ವೃದ್ಧೆ ಸಾವು! | ಜನತಾ ನ್ಯೂಸ್
ಉಪ್ಪಿನಂಗಡಿ: : ನೀರೆಂದು ಭಾವಿಸಿ ಪೆಟ್ರೋಲ್ ಕುಡಿದ ವೃದ್ಧೆ ಸಾವನಪ್ಪಿರುವ ಘಟನೆ ಪೆರ್ನೆ ಎಂಬಲ್ಲಿ ನಡೆದಿದೆ.
ಬಂಟ್ವಾಳ ನಿವಾಸಿ ಪದ್ಮಾವತಿ (79) ಎಂಬುವರು ಉಪ್ಪಿನಂಗಡಿ ಸಮೀಪದ ಪೆರ್ನೆಯ ಸಂಪದಕೋಡಿಯಲ್ಲಿರುವ ಮಗಳ ಮನೆಗೆ ಬಂದಿದ್ದಾಗ ಘಟನೆ ನಡೆದಿದೆ.
ಹುಲ್ಲು ಕತ್ತರಿಸುವ ಯಂತ್ರಕ್ಕೆಂದು ತಂದಿರಿಸಿದ್ದ ಪೆಟ್ರೋಲ್ ಅನ್ನು ವೃದ್ಧೆ ಸೆ. 26 ರಂದು ಸೇವಿಸಿದ್ದರು.ನಂತರ ಆರೋಗ್ಯದಲ್ಲಿ ಏರುಪೇರಾಗಿ ಅಸ್ವಸ್ಥರಾದ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಿಸದೆ ವೃದ್ಧೆ ಕೊನೆಯುಸಿರೆಳೆದರು. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :Mangalore