Fri,Apr26,2024
ಕನ್ನಡ / English

ದಸರಾ ಉದ್ಘಾಟನೆಗಾಗಿ ಎಸ್.ಎಂ.ಕೃಷ್ಣಗೆ ಅಧಿಕೃತ ಆಹ್ವಾನ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ! | ಜನತಾ ನ್ಯೂಸ್

02 Oct 2021
2379

ಮೈಸೂರು : ಈ ಬಾರಿಯ ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ದಸರಾ ಉದ್ಘಾನೆಗಾಗಿ ಸಿಎಂ ಬಸವರಾಜ ಬೊಮ್ಮಾಯಿ ಅಧಿಕೃತ ಆಹ್ವಾನ ನೀಡಿದರು.

ಸದಾಶಿವನಗರದಲ್ಲಿರುವ ಡಾ.ಎಸ್.ಎಂ.ಕೃಷ್ಣರ ನಿವಾಸಕ್ಕೆ ಆಗಮಿಸಿ ಆಹ್ವಾನ ನೀಡಿದ್ದಾರೆ. ಬಸವರಾಜ್ ಬೊಮ್ಮಾಯಿಗೆ ಸಚಿವರಾದ ಆರ್.ಅಶೋಕ್, ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಈ ಸಂದರ್ಭದಲ್ಲಿ ಉಪಸ್ಥಿತಿತರಿದ್ದರು.

ಎಸ್.ಎಂ.ಕೃಷ್ಣ ಅವರಿಗೆ ಮೈಸೂರು ಪೇಟಾ ತೊಡಿಸಿ, ಫಲಪುಷ್ಪ ತಾಂಬೂಲದೊಂದಿಗೆ, ಶಿವಾನಿ ಮರದಲ್ಲಿ ಕೈಯಿಂದ ಕೆತ್ತಲಾದ ಅಂಬಾರಿಯ ವಿಗ್ರಹದ ನೆನಪಿನ ಕಾಣಿಕೆ ನೀಡಿ ಗೌರವಿಸುವ ಮೂಲಕ ದಸರಾ ಉದ್ಘಾಟನೆಗೆ ಆಹ್ವಾನಿಸಲಾಯಿತು.

ದಸರಾ ಉದ್ಘಾಟನೆಗೆ S.M.ಕೃಷ್ಣರನ್ನು ಆಹ್ವಾನಿಸಿದ್ದೇವೆ. ಕನ್ನಡಿಗರಿಗೆ ಪ್ರೀತಿಯ ವ್ಯಕ್ತಿ ಇವರು, ನಮಗೆಲ್ಲಾ ಆದರಣೀಯ. ಎಸ್.ಎಂ.ಕೃಷ್ಣ ನಮ್ಮ ಆಮಂತ್ರಣ ಒಪ್ಪಿಕೊಂಡಿದ್ದಾರೆ. ಎಸ್.ಎಂ.ಕೃಷ್ಣ ಒಬ್ಬ ಮುತ್ಸದ್ಧಿ ರಾಜಕಾರಣಿ. ಹೀಗಾಗಿ ನಾವು ಅವರಿಗೆ ಆಭಾರಿಯಾಗಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಡಾ.ಎಸ್.ಎಂ.ಕೃಷ್ಣ ಮಾತನಾಡಿ., ಮೈಸೂರು ಬಹಳ ಅಭಿವೃದ್ಧಿ ಪಥದಲ್ಲಿ ಇರುವಂತಹ ಪಟ್ಟಣ. ನನ್ನ ಮೇಲೆ ಗೌರವವಿಟ್ಟು ಇಂತಹ ಸುಯೋಗ ದೊರಕಿಸಿಕೊಟ್ಟಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಸಚಿವ ಸಂಪುಟದ ಎಲ್ಲರಿಗೂ ನನ್ನ ಅಭೂತಪೂರ್ವ ಅಭಿನಂದನೆಗಳು, ಸರ್ಕಾರದ ಈ ಆಹ್ವಾನವನ್ನು ವಿನಮ್ರವಾಗಿ ಸ್ವೀಕರಿಸುತ್ತಿದ್ದೇನೆ ಎಂದು ಹೇಳಿದರು.

RELATED TOPICS:
English summary :Mysuru

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...