ಸಚಿವ ಕೆ.ಎಸ್.ಈಶ್ವರಪ್ಪ ಹೆಸರಿನಲ್ಲಿ ಲಕ್ಷ ಲಕ್ಷ ಹಣ ವಂಚನೆ, ಇಬ್ಬರ ಬಂಧನ! | ಜನತಾ ನ್ಯೂಸ್
ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಅವರ ಹೆಸರು ದುರ್ಬಳಿಕೆ ಮಾಡಿಕೊಂಡ ಪ್ರಕರಣದಲ್ಲಿ ಇಬ್ಬರ ಬಂಧನವಾಗಿದೆ.
ಸಚಿವರ ಹೆಸರು ಹೇಳಿ ಲಕ್ಷ ಲಕ್ಷ ಹಣ ಅಮಾಯಕರಿಂದ ಪಡೆದು ವಂಚನೆ ಮಾಡಿದ್ದಾರೆ. ಸಚಿವರ ಬಳಿ ಕೆಲಸ ಮಾಡಿಸಿಕೊಡವುದಾಗಿ ನಂಬಿಸಿ ಉದ್ಯಮಿ ಮತ್ತು ಗುತ್ತಿಗೆದಾರರಿಂದ ಹಣ ವಸೂಲಿ ಮಾಡಿದ್ದಾರೆ.
ಸಚಿವರ ಆಪ್ತರು ಮತ್ತು ಅವರ ಆಪ್ತ ಸಹಾಯಕ ಎಂದು ಶಿವಮೊಗ್ಗದ ಎಚ್. ಎನ್. ಮಂಜುನಾಥ್, ವಿಠ್ಠಲ್ ರಾವ್, ಮಹ್ಮದ್ ಮುಸಾಫಿರ್, ಖಾಜಿವಾಲಿಸ್ ಹಾಗೂ ಮಹ್ಮದ್ ರೆಹಮಾನ್, ಉದ್ಯಮಿ ಹಾಗೂ ಗುತ್ತಿಗೆದಾರಿಗೆ ವಂಚನೆ ಮಾಡುತ್ತಿದ್ದರು. ಪೊಲೀಸರು ವಿಠಲ್ ರಾವ್, ಮತ್ತು ಖಾಜಿವಲೀಸ್ ಇಬ್ಬರನ್ನು ಬಂಧಿಸಿದ್ದು ಮೂವರು ತಲೆ ಮರೆಸಿಕೊಂಡಿದ್ದಾರೆ.
ಮೈಸೂರಿನ ಸಿವಿಲ್ ಇಂಜಿನಿಯರ್ ರಾಜೇಶ್ ಎಂಬುವವರಿಗೆ 100 ಕೋಟಿ ರೂಪಾಯಿ ಲೋನ್ ಕೊಡಿಸುವುದಾಗಿ ನಂಬಿಸಲಾಗಿದೆ. ವಿಲ್ಲಾ ಪ್ರಾಜೆಕ್ಟ್ಗಾಗಿ ಈ ಲೋನ್ ಕೊಡಿಸುವುದಾಗಿ ತಿಳಿಸಲಾಗಿತ್ತು.
ಸಾಗರದ ಲಕ್ಷ್ಮಣ, ಮೈಸೂರಿನ ರಾಜೇಶ್ ಎಂಬುವವರಿಂದ ಪ್ರತ್ಯೇಕ ದೂರು ಸಲ್ಲಿಕೆಯಾಗಿತ್ತು. ಸಾಗರ ತಾಲೂಕಿನ ಬಾರೂರು ಗ್ರಾಮದ ಮುತ್ತಲ ಬೈಲಿನ ಲಕ್ಷ್ಮಣ್ ಎಂಬುವರು ಲೋಕೋಪಯೋಗಿ ಇಲಾಖೆ ಕಾರ್ಯಕ್ರಮಗಳ ಗುತ್ತಿಗೆದಾರರಾಗಿದ್ದಾರೆ .
ವಿಲ್ಲಾ ಪ್ರಾಜೆಕ್ಟ್ಗಾಗಿ ಸಚಿವರ ಮೂಲಕ 100 ಕೋಟಿ ರು. ಸರ್ಕಾರದ ನೆರವು ಕೊಡಿಸುವುದಾಗಿ ನಂಬಿಸಿ 2020ರ ಫೆಬ್ರುವರಿಯಲ್ಲಿ 10 ಲಕ್ಷ ಮುಂಗಡ ಪಡೆದಿದ್ದರು. ನಂತರ ಕೈಗೆ ಸಿಗದೆ ಅಲೆದಾಡಿಸುತ್ತಿದ್ದರು. ವಂಚನೆಗೆ ಒಳಗಾಗಿರುವುದು ಖಚಿತವಾದ ನಂತರ ಹಣ ಹಿಂದಿರುಗಿಸಲು ಕೇಳಿದರೆ ಜೀವ ಬೆದರಿಕೆ ಹಾಕಿದ್ದರು ಎಂದು ಮೈಸೂರಿನ ಹೆಬ್ಬಾಳದ ಎಂಜಿನಿಯರ್ ಸಿ.ರಾಜೇಶ್ ಪ್ರಕರಣ ದಾಖಲಿಸಿದ್ದಾರೆ.