ಚಿನ್ನದ ಪದಕ ಪಡೆದಿದ್ದ ಗೃಹಿಣಿ ಅನುಮಾನಾಸ್ಪದ ಸಾವು! ಕೊಲೆಯೋ? ಆತ್ಮಹತ್ಯೆಯೋ? | ಜನತಾ ನ್ಯೂಸ್
ಮೈಸೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಗೋಲ್ಡ್ ಮೆಡಲ್ ಪಡೆದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಕುಟುಂಬಸ್ಥರೇ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮಡೇನಹಳ್ಳಿಯ ಆಶಾ ಸಾವನ್ನಪ್ಪಿರುವ ಗೃಹಿಣಿ. ಇವರು ಮಳವಳ್ಳಿಯ ನಾಗಾಪ್ರಸಾದ್ ಎಂಬಾತನನ್ನು ಪ್ರೀತಿಸಿ ಕಳೆದ ಎಂಟು ವರ್ಷದ ಹಿಂದೆ ವಿವಾಹವಾಗಿದ್ದರು. ಮೈಸೂರಿನ ಜೆ.ಪಿ.ನಗರದಲ್ಲಿ ಗಂಡನೊಂದಿಗೆ ವಾಸವಾಗಿದ್ದರು.
ತವರು ಮನೆಯಿಂದ ಹಣ ತರುವಂತೆ ಗಂಡನಿಂದ ನಿರಂತರ ಕಿರುಕುಳವಾಗುತ್ತಿತ್ತು. ಈ ಬಗ್ಗೆ ಎರಡು ಬಾರಿ ಪೋಲಿಸ್ ಸ್ಟೇಷನ್ನಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣ ಡೈವೋರ್ಸ್ ಹಂತಕ್ಕೆ ಹೋಗಿತ್ತು. ಫ್ಯಾಮಿಲಿ ಕೋರ್ಟ್ನಲ್ಲಿ ಕೂಡ ರಾಜಿ ಪಂಚಾಯಿತಿ ನಡೆದಿತ್ತು ಎನ್ನಲಾಗಿದೆ.
ಇದಾದ ಮೇಲೂ ನಾಗಾಪ್ರಸಾದ್ ನಿರಂತರವಾಗಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದರಂತೆ. ಆಶಾ ನಿನ್ನೆಯಷ್ಟೆ ಗಂಡನ ಮನೆ ಬಿಟ್ಟು ಪಿಜಿಯಲ್ಲಿ ಇರುತ್ತೇನೆ ಎಂದು ಹೇಳಿದ್ದರು. ಆದರೆ ನಿನ್ನೆ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ನಾಗಾಪ್ರಸಾದ್ ಕರೆಮಾಡಿದ್ದಾರೆ.
ಪೋಷಕರು ನಾಗಪ್ರಸಾದ್ ಕೊಲೆ ಮಾಡಿದ್ದಾನೆಂದು ದೂರು ನೀಡಿದ್ದಾರೆ. ಈ ಸಂಬಂಧ ಮೈಸೂರಿನ ವಿದ್ಯಾರಣ್ಯಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.