ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂಸ್
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದು ಇಬ್ಬರು ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಮರಳಿಗ ಗ್ರಾಮದಲ್ಲಿ ನಡೆದಿದೆ.
ಕೀಳಘಟ್ಟ ಗ್ರಾಮದ ಗಿರಿಶೆಟ್ಟಿ(65) ಹಾಗು ಎನ್.ಕೋಡಿಹಳ್ಳಿ ಗ್ರಾಮದ ಗ್ರಾಪಂ ಮಾಜಿ ಸದಸ್ಯ ಲೋಕೇಶ್ (45) ಘಟನೆಯಲ್ಲಿ ಸಾವನ್ನಪ್ಪಿದ ದುರ್ದೈವಿಗಳು.
ಇಂದು ಬೆಳಗ್ಗೆ ಗ್ರಾಮದ ನಿಂಗೇಗೌಡ ಎಂಬುವರಿಗೆ ಸೇರಿದ ಕೋಳಿ ಅಂಗಡಿ ಮುಂದೆ ಕುಳಿತಿದ್ದಾಗ ವೇಗವಾಗಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಅಂಗಡಿ ಕಡೆ ನುಗ್ಗಿದ ಪರಿಣಾಮ ಗಿರೀಶ್ ಶೆಟ್ಟಿ ಹಾಗೂ ಲೋಕೇಶ್ ಲಾರಿ ಅಡಿ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಘಟನೆಯಿಂದ ಅಂಗಡಿ ಮತ್ತು ಅಂಗಡಿ ಮುಂದೆ ನಿಂತಿದ್ದ ಎರಡು ಬೈಕ್ ಜಖಂಗೊಂಡಿವೆ. ಈ ಸಂಬಂಧ ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.