ಮುಸ್ಲಿಂ ಸಮುದಾಯಕ್ಕೆ ಸಿದ್ದರಾಮಯ್ಯ ಒಬ್ಬರೇ ನಾಯಕ : ಇಕ್ಬಾಲ್ ಅನ್ಸಾರಿ | ಜನತಾ ನ್ಯೂಸ್
ಕೊಪ್ಪಳ : ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಸಿದ್ದರಾಮಯ್ಯ ಒಬ್ಬರೇ ನಾಯಕ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಅಲ್ಪಸಂಖ್ಯಾತರ ವಿಚಾರವಾಗಿ ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದರು.
ಈ ಬಗ್ಗೆ ಕೊಪ್ಪಳದ ಗಂಗಾವತಿಯಲ್ಲಿ ಮಾತನಾಡಿದ ಇಕ್ಬಾಲ್ ಅನ್ಸಾರಿ, ಬೇರೆ ಪಕ್ಷದವರು ಏನೇ ಹೇಳಿದ್ರೂ, ನಾವು ಸಿದ್ದರಾಮಯ್ಯರನ್ನು ಬಿಟ್ಟು ಯಾರನ್ನೂ ಒಪ್ಪಲ್ಲ. ಮುಸ್ಲಿಂ ಸಮುದಾಯದವರು ಸಿದ್ದರಾಮಯ್ಯರನ್ನು ಬಿಟ್ಟು ಬೇರೆ ಯಾರನ್ನೂ ನಮ್ಮ ಸಮುದಾಯ ಒಪ್ಪಲ್ಲ. ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ಸಿದ್ದರಾಮಯ್ಯ ಒಬ್ಬರೇ ನಾಯಕ ಎಂದು ಹೇಳಿದರು.
ಇನ್ನು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಅಲ್ಪಸಂಖ್ಯಾತರಿಗೆ ಅನೇಕ ಯೋಜನೆಗಳನ್ನು ಕೊಟ್ಟಿದ್ದಾರೆ. ವಕ್ಫ್ ಬೋರ್ಡ್ ಇಲಾಖೆಯಿಂದ ಹಣ ಕೊಡಿಸಿದ್ದಾರೆ.
ಕುಮಾರಸ್ವಾಮಿ ಮತ್ತು ದೇವೇಗೌಡರು ನನಗೆ ಮಂತ್ರಿ ಸ್ಥಾನ ಕೊಟ್ಟಿದ್ದಾರೆ ಇದನ್ನು ನಾನಾಗಲಿ, ನನ್ನ ಕುಟುಂಬವಾಗಲಿ ಮರೆಯಲು ಸಾಧ್ಯವಿಲ್ಲ. ಬಿಜೆಪಿಯ ಅನುಕೂಲಕ್ಕಾಗಿ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ. ಕುಮಾರಸ್ವಾಮಿ ಮುಸ್ಲಿಂ ಸಮುದಾಯಕ್ಕಾಗಿ ಕೆಲಸ ಮಾಡಿಲ್ಲ. ನಮ್ಮ ಸಮುದಾಯಕ್ಕೆ ಎಚ್ಡಿಕೆ ಯಾವುದಾದರೂ ಒಂದು ಕೆಲಸ ಮಾಡಿದ್ದರೆ ಬಹಿರಂಗವಾಗಿ ಬಂದು ಹೇಳಿಕೆ ನೀಡಲಿ ಎಂದು ಸವಾಲು ಹಾಕಿದ್ದಾರೆ