ನಮಗೆ ಅವರ ಬಗ್ಗೆ ಟೀಕೆ ಮಾಡುವಷ್ಟು ಶಕ್ತಿಯಿಲ್ಲ: ಹೆಚ್ಡಿ ದೇವೇಗೌಡ | ಜನತಾ ನ್ಯೂಸ್
ವಿಜಯಪುರ : ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಒಬ್ಬ ಡ್ರಗ್ ಪೆಡ್ಲರ್ ಅನ್ನೋ ಹೇಳಿಕೆ ಬಗ್ಗೆ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡರು, ನಮಗೆ ಅವರ ಬಗ್ಗೆ ಟೀಕೆ ಮಾಡುವಷ್ಟು ಶಕ್ತಿಯಿಲ್ಲ ಎಂದು ಹೇಳಿದ್ದಾರೆ.
ಇಲ್ಲಿ ಉಪಚುನಾವಣೆಗಿಂತ ಹೆಚ್ಚಾಗಿ ಕಾಂಗ್ರೆಸ್, ಬಿಜೆಪಿ ಮುಖಂಡರ ಮಧ್ಯೆ ಸ್ಪರ್ಧೆ ಇದೆ. ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ "ಬೈಗಮಿ" ಟ್ವೀಟ್ಗಳಿಂದ ಚುನಾವಣೆಗಳು ಗೆಲ್ಲುವುದಕ್ಕೆ ಆಗಲ್ಲ. ಅದರಿಂದ ಲಾಭ ಸಿಗುವುದಾದ್ರೆ ಟ್ವೀಟ್ ಮಾಡಿಕೊಳ್ಳಲಿ. ಅವರು ಬೇಕಾದಷ್ಟು ಟ್ವೀಟ್ ಮಾಡಿಕೊಳ್ಳಲಿ ಎಂದು ದೇವೇಗೌಡ ಹೇಳಿದ್ದಾರೆ. ವೈಯಕ್ತಿಕ ಟೀಕೆಗಳಿಂದ ಲಾಭ ಸಿಗುತ್ತೆ ಎಂದು ತಿಳಿದಿದ್ದಾರೆ. ಚುನಾವಣೆಯಲ್ಲಾಗಲೀ, ರಾಜಕೀಯದಲ್ಲಾಗಲಿ ಗೆಲ್ಲಲು ಆಗಲ್ಲ. ಅವರಿಗೆ ಬುದ್ಧಿ ಹೇಳುವ ಶಕ್ತಿ ಇಲ್ಲ. ಎರಡು ಪಕ್ಷಗಳಿಗೆ ಹಣಕಾಸಿನ ಶಕ್ತಿ ಇದೆ ಎಂದು ದೇವೇಗೌಡ ಹೇಳಿದ್ದಾರೆ.