Sun,May19,2024
ಕನ್ನಡ / English

ಕನ್ನಡಕ್ಕಾಗಿ ನಾವು - ವಿಶೇಷ ಅಭಿಯಾನಕ್ಕೆ ಚಾಲನೆ: ಕನ್ನಡ ಉಳಿಸಿ ಬೆಳೆಸಲು ಸಚಿವ ವಿ.ಸುನಿಲ್ ಕುಮಾರ್ ಕರೆ | ಜನತಾ ನ್ಯೂಸ್

24 Oct 2021
1818

ಬೆಂಗಳೂರು : ಕನ್ನಡ ನಮ್ಮ ಸಂಸ್ಕೃತಿ. ಕನ್ನಡವನ್ನು ಉಳಿಸಿ ಬೆಳೆಸಲು ದೊಡ್ಡ ಪ್ರಮಾಣದ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಮನೆ ಮನೆಗಳಲ್ಲಿ ಹಾಗೂ ಮನ ಮನ ಗಳಲ್ಲಿ ಕನ್ನಡ ಮಾತನಾಡುವ ಮೂಲಕ ಕನ್ನಡ ವಾತಾವರಣ ನಿರ್ಮಾಣ ಆಗಬೇಕಿದೆ, ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ವಿ.ಸುನಿಲ್ ಕುಮಾರ್ ಕರೆ ನೀಡಿದರು.

ಅವರು ಇಂದು ಬೆಂಗಳೂರಿನ ಲಾಲ್ ಬಾಗ್ ನಲ್ಲಿ ೬೬ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ "ಕನ್ನಡಕ್ಕಾಗಿ ನಾವು" ವಿಶೇಷ ಅಭಿಯಾನಕ್ಕಾಗಿ ರಚಿಸಲಾದ "ಮಾತಾಡ್ ಮಾತಾಡ್ ಕನ್ನಡ" ಎನ್ನುವ ಕಿರು ನಾಟಕಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.

"ಮಾತಾಡ್ ಮಾತಾಡ್ ಕನ್ನಡ" ಎನ್ನುವ ಘೊಷವಾಕ್ಯದೊಂದಿಗೆ ಆರಂಭವಾದ ಈ ಅಭಿಯಾನ ಅಕ್ಟೋಬರ್ ೩೧ ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ನಾಡಿನಾಧ್ಯಂತ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಲಿವೆ. ಮನೆಗಳಲ್ಲಿ ಕನ್ನಡ ಮಾತನಾಡುವ ಮೂಲಕ ಮಕ್ಕಳಲ್ಲಿ ಕನ್ನಡ ಭಾಷೆ ಕುರಿತ ಹೆಮ್ಮೆ ಮೂಡಿಸಬೇಕು. ಕನ್ನಡಲ್ಲಿ ಸಹಿ ಮಾಡುವ ರೂಢಿ ಹೆಚ್ಚಾಗ ಬೇಕು. ಚರವಾಣಿಗಳಲ್ಲಿ ಕನ್ನಡ ಸಂದೇಶಗಳನ್ನು ಕಳಿಸುವ ಪದ್ಧತಿ ಶುರು ಆಗಬೇಕು. ಈ ಮೂಲಕ "ಕನ್ನಡಕ್ಕಾಗಿ ನಾವು" ಅಭಿಯಾನ ಯಶಸ್ವಿಯಾಗಿಸಬೇಕು ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.

"ಕನ್ನಡಕ್ಕಾಗಿ ನಾವು" ಅಭಿಯಾನದ ಹಿನ್ನೆಲೆಯಲ್ಲಿ ಅ.೨೮ ರಂದು ಬೆಳಗ್ಗೆ ೧೧ ಗಂಟೆಗೆ ಕನ್ನಡ ಗೀತೆಗಳನ್ನು ಸಾಮೂಹಿಕವಾಗಿ ಹಾಡುವ ವಿಶೇಷ ಪ್ರಯತ್ನ ಈ ಬಾರಿ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರತಿಯಬ್ಬರು ಭಾಗವಹಿಸಬೇಕು. ಗುಂಪು ಗುಂಪಾಗಿ, ಕಚೇರಿಗಳ ಮುಂಭಾಗ, ಕಾರ್ಖಾನೆಗಳಲ್ಲಿ, ವಸತಿ ಸಮುಚ್ಛಯಗಳಲ್ಲಿ, ಗಡಿನಾಡು, ಹೊರನಾಡುಗಳಲ್ಲಿಯೂ ಕನ್ನಡದ ಗೀತೆಗಳನ್ನು ಹಾಡಬೇಕಿದೆ, ಎಂದು ಸಚಿವರು ತಿಳಿಸಿದರು.

ಕುವೆಂಪು ಭಾಷಾ ಭಾರತಿಯಿಂದ ಪ್ರಕಟಿಸಿರುವ, ಕನ್ನಡೇತರರಿಗೆ ಕನ್ನಡ ಕಲಿಸುವ, ಕಿರು ಹೊತ್ತಿಗೆಯನ್ನು ಸಾರ್ವಜನಿಕರಿಗೆ ವಿತರಣೆ ಮಾಡಿದರು. ಲಾಲ್ ಬಾಗ್ ಮೆಟ್ರೋ ನಿಲ್ದಾಣದಲ್ಲಿ ಕನ್ನಡ ಅಭಿಯಾನದ ಸ್ವಯಂ ಭಾವ ಚಿತ್ರ ಕೇಂದ್ರದಲ್ಲಿ( ಸೆಲ್ಫಿ) ಸ್ವತಃ ಸಚಿವರೇ ಸ್ವಯಂ ಭಾವಚಿತ್ರ ತೆಗೆದುಕೊಂಡು ಉದ್ಘಾಟಿಸಿದರು. ನಂತರ ಮೆಟ್ರೋ ನಿಲ್ದಾಣದಲ್ಲಿ ಮಾತಾಡ್ ಮಾತಾಡ್ ಕನ್ನಡ ಘೋಷ ವಾಕ್ಯದ ಭಿತ್ತಿ ಪತ್ರಗಳನ್ನು ಅಂಟಿಸಿದರು.

ಅಭಿಯಾನದ ಅಂಗವಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಮೈಸೂರಿನ ರಂಗಾಯಣ ಹಮ್ಮಿಕೊಂಡಿರುವ ಡಾ.ಎಸ್.ಎಲ್.ಬೈರಪ್ಪ ಅವರ ಕಾದಂಭರಿ ಆಧಾರಿತ "ಪರ್ವ" ನಾಟಕಕ್ಕೆ ಸಚಿವರು ಚಾಲನೆ ನೀಡಿದರು. "ಕನ್ನಡಕ್ಕಾಗಿ ನಾವು" ಅಭಿಯಾನದ ಹಿನ್ನೆಲೆಯಲ್ಲಿ ತಯಾರಿಸಲಾದ ವಿವಿಧ ವಿಡಿಯೋ ಪ್ರದರ್ಶನದ ಎಲ್.ಇ.ಡಿ ಪರದೆ ಹೊಂದಿರುವ ವಾಹನಕ್ಕೆ ಚಾಲನೆ ನೀಡಿದರು.

ಕಾಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಮಂಜುಳಾ, ಇಲಾಖೆಯ ನಿರ್ದೇಶಕ ರಂಗಪ್ಪ ಹಾಗೂ ಇತರರು ಹಾಜರಿದ್ದರು.

RELATED TOPICS:
English summary :Kannadakkagi Navu - special campaign inaugurated : Min.V.Sunil Kumar calls for save, grow Kannada

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...