ಚಿನ್ನದ ಫ್ರೇಮ್ ಇರುವ ಸಿದ್ದರಾಮಯ್ಯ ಭಾವಚಿತ್ರ ನೀಡಿ ಸನ್ಮಾನ | ಜನತಾ ನ್ಯೂಸ್
ಬಾಗಲಕೋಟೆ : ಬಾಗಲಕೋಟೆಯ ಬಾದಾಮಿಗೆ ಭೇಟಿ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಪಕ್ಷ ಮುಖಂಡರು ಚಿನ್ನದ ಫ್ರೇಮ್ ಇರುವ ಸಿದ್ದರಾಮಯ್ಯ ಅವರ ಫೋಟೋ ನೀಡಿ ಅದ್ಧೂರಿ ಸ್ವಾಗತ ಕೋರಿದ್ದಾರೆ.
ಸಿದ್ದರಾಮಯ್ಯ ಅವರು ಇಂದು ಬಾಗಲಕೋಟೆಯ ಬಾದಾಮಿಗೆ ಆಗಮಿಸಿದ್ದ ವೇಳೆ ಜೆಸಿಬಿ ಮೂಲಕ ಪುಷ್ಪಾರ್ಚನೆ ಮಾಡಿ ಸಿದ್ದರಾಮಯ್ಯ ಅವರನ್ನು ಭರ್ಜರಿಯಾಗಿ ಸ್ವಾಗತ ಕೋರಲಾಗಿದೆ.
ಈ ಫೋಟೋವನ್ನು ಬ್ಯಾಂಕಾಕ್ನಲ್ಲಿ ತಯಾರು ಮಾಡಿಸಲಾಗಿದೆ. 40 ಗ್ರಾಂ ಚಿನ್ನ ಸಹಾಯದಿಂದ ಫ್ರೇಮ್ ತಯಾರಿಸಲಾಗಿದೆ. ಬಾದಾಮಿ ಕಾಂಗ್ರೆಸ್ ಮುಖಂಡ ಮಹೇಶ್ ಹೊಸಗೌಡ ಅವರು ಈ ಸಿದ್ದರಾಮಯ್ಯ ಅವರಿಗೆ ಫೋಟೋ ಫ್ರೇಮ್ ನೀಡಿ ಸನ್ಮಾನ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಾನು ಮುಖ್ಯಮಂತ್ರಿ ಆಗಿದ್ದಾಗ ಎಲ್ಲ ವರ್ಗದ ಜನರಿಗೆ ನ್ಯಾಯ ಸಿಗಬೇಕೆಂದು ಕೆಲಸ ಮಾಡಿದ್ದೆ. ಅನ್ನ ಭಾಗ್ಯ, ಕ್ಷೀರ ಭಾಗ್ಯ, ಕೃಷಿ ಭಾಗ್ಯ, ಇಂದಿರಾ ಕ್ಯಾಂಟೀನ್ ಸೇರಿ ವಿವಿಧ ಯೋಜನೆಗಳಿಂದ ಬಡವರಿಗೆ ಅನುಕೂಲ ಮಾಡಿದ್ದೇನೆ. ಯಾವುದೇ ಜಾತಿ, ಸಮಾಜದವರಿರಲಿ ಎಲ್ಲರೂ ಸಮಾನರು ಎಂದು ಹೇಳಿದರು.