ಗದಗ ಕೃಷಿ ಇಲಾಖೆಯ ಜೆ.ಡಿ ಮನೆ ಮೇಲೆ ACB ದಾಳಿ: ₹ಕೋಟ್ಯಂತರ ಮೌಲ್ಯದ ನಗ-ನಗದು ಪತ್ತೆ | ಜನತಾ ನ್ಯೂಸ್
ಗದಗ : ಗದಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪರಿಗೆ ಸೇರಿದ ಶಿವಮೊಗ್ಗದ ಚಾಲುಕ್ಯ ನಗರದಲ್ಲಿರುವ ಮನೆಯ ಮೇಲೆ ಬುಧವಾರ ದಾಳಿ ನಡೆಸಿದ ಎಸಿಬಿ ಪೊಲೀಸರು ಅಪಾರ ಪ್ರಮಾಣದ ಚಿನ್ನಾಭರಣ, ನಗದು ವಶಕ್ಕೆ ಪಡೆದಿದ್ದಾರೆ.
ಅಕ್ರಮ ಆಸ್ತಿ ಹಾಗೂ ಭ್ರಷ್ಟಚಾರ ಆರೋಪದ ಹಿನ್ನೆಲೆ ಅಧಿಕಾರಿಗಳು, ಸಿಬ್ಬಂದಿಗಳ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ನಗರದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ. ಎಸ್. ರುದ್ರೇಶಪ್ಪ ಅವರ ಹುಡ್ಕೋ ಕಾಲೋನಿ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೊತೆಗೆ ರುದ್ರೇಶಪ್ಪಗೆ ಸಂಬಂಧಿಸಿದ ಗದಗ, ಶಿವಮೊಗ್ಗ, ದಾವಣಗೆರೆ, ಸೇರಿದಂತೆ ಐದು ಮನೆಗಳ ಮೇಲೆ ಕೂಡ ದಾಳಿ ನಡೆಸಿದ್ದಾರೆ.
ದಾಳಿಯ ಸಮಯದಲ್ಲಿ ಮನೆಯಲ್ಲಿ 3.5 ಕೋಟಿ ರೂ. ಮೌಲ್ಯದ ಸುಮಾರು 7 ಕೆ.ಜಿ. ಚಿನ್ನಾಭರಣ, 2 ಲಕ್ಷ ರೂ. ಮೌಲ್ಯದ 3 ಕೆ.ಜಿ. ಬೆಳ್ಳಿ ಹಾಗೂ 15 ಲಕ್ಷ ರೂ. ನಗದು ದೊರೆತಿದೆ ಎನ್ನಲಾಗಿದೆ.