Thu,Apr25,2024
ಕನ್ನಡ / English

ಎಷ್ಟೇ ವರ್ಗಾವಣೆ ಮಾಡಿದ್ರೂ ಅದೇ ಜಾಗಕ್ಕೆ ಬಂದು ಕುಳಿತುಕೊಳ್ಳುತ್ತಿದ್ದ ಎಫ್​ಡಿಎ ಮಾಯಣ್ಣರ ಬಳಿ ಕೋಟಿ ಕೋಟಿ ಆಸ್ತಿ | ಜನತಾ ನ್ಯೂಸ್

24 Nov 2021
3163

ಬೆಂಗಳೂರು : ಬಿಬಿಎಂಪಿ ರಸ್ತೆ ವಿಭಾಗದ ಎಫ್ ಡಿಸಿ ಮಾಯಣ್ಣ ವಿರುದ್ದ ನೂರಾರು ಆರೋಪಗಳಿವೆ. ಎಷ್ಟೇ ವರ್ಗಾವಣೆ ಮಾಡಿದ್ರೂ ಅದೇ ಜಾಗಕ್ಕೆ ಬಂದು ಮಾಯಣ್ಣ ಕುಳಿತುಕೊಳ್ಳುತ್ತಿದ್ದನು.

ಬಿಬಿಎಂಪಿ ನೌಕರ ಮಾಯಣ್ಣ ಅವರ ಮನೆ ಮೇಲೆ ಇಂದು ಎಸಿಬಿ ದಾಳಿ ನಡೆಸಿದೆ. ದಾಳಿಯಲ್ಲಿ ಭಾರೀ ಪ್ರಮಾಣದ ದಾಖಲೆಗಳು ದೊರೆತಿದ್ದು, ಇವರ ಬಗ್ಗೆ ಗಂಭೀರ ಆರೋಪಗಳು ಕೇಳಿಬರುತ್ತಿದೆ.

ಮಾಯಣ್ಣ ಅವರು ರಸ್ತೆ ಹಾಗೂ ಮೂಲಭೂತ ಸೌಕರ್ಯ ವಿಭಾಗದಲ್ಲಿ ಪ್ರಥಮ ದರ್ಜೆ ಸಹಾಯಕನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2009 ರಿಂದ 11 ವರ್ಷಗಳ ಕಾಲ ಒಂದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸಾಕಷ್ಟು ಬಾರಿ ಬಿಬಿಎಂಪಿಯ ಬೇರೆ ವಿಭಾಗಗಳಿಗೆ ವರ್ಗಾವಣೆಗಳಾದ್ದರೂ, ಮೇಲಾಧಿಕಾರಿಗಳಿಂದ ಒತ್ತಡ ತಂದು ಮತ್ತದೇ ಪೋಸ್ಟ್‌ನಲ್ಲಿ ಉಳಿದುಕೊಳ್ಳುತ್ತಿದ್ದರು. ಐದು ವರ್ಷದ ಹಿಂದೆ ಸಸ್ಪೆಂಡ್ ಆಗಿದ್ದರು. ಸಸ್ಪೆಂಡ್ ರಿವೋಕ್ ಮಾಡಿಸಿಕೊಂಡು ಮತ್ತೆ ಇದೇ ಹುದ್ದೆಯಲ್ಲೇ ಮುಂದುವರೆದಿದ್ದರು.

2012 /13 ರಲ್ಲಿ ಕಾನೂನು ಬಾಹಿರವಾಗಿ ಗುತ್ತಿಗೆದಾರರಿಗೆ 135 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿರುವ ಆರೋಪ ಸಹ ಮಾಯಣ್ಣನ ಮೇಲಿದೆ. ಜೊತೆಗೆ 26 ಕೋಟಿರೂಪಾಯಿ‌ ಹೆಚ್ಚಿನ ಹಣವನ್ನು ಗುತ್ತಿಗೆದಾರರಿಗೆ ಪಾವತಿಸಿದ್ದ ಆರೋಪ ಇದೆ. ಬಿಬಿಎಂಪಿ ಲೆಕ್ಕಪರಿಶೋಧಕ ವರದಿಯಲ್ಲಿ ಮಾಯಣ್ಣ ಅಕ್ರಮ ಬಯಲು ಆಗಿತ್ತು.

ಬಿಬಿಎಂಪಿ ಲೆಕ್ಕಪರಿಶೋಧಕ ವರದಿಯಲ್ಲಿ ಮಾಯಣ್ಣ ಅಕ್ರಮ ಬಯಲಾದ ಹಿನ್ನೆಲೆಯಲ್ಲಿ ಮಾಯಣ್ಣ ಅವರ ಸ್ವಂತ ಅಕೌಂಟ್‍ನಿಂದ ಹಣ ವಸೂಲಿ ಮಾಡುವಂತೆ ನಗರಾಭಿವೃದ್ಧಿ ಇಲಾಖೆ ಆದೇಶಿಸಿತ್ತು. ಎಸಿಬಿ ಬೇಟೆಗೆ ಬಿದ್ದ ಮಾಯಣ್ಣ ಅವರು ಒಟ್ಟಾರೆಯಾಗಿ 135 ಕೋಟಿ ರೂ.ಗಳನ್ನು ಸರ್ಕಾರಕ್ಕೆ ನೀಡಬೇಕಿದೆ.

ಬಿಬಿಎಂಪಿ ಮೂಲ ಸೌಕರ್ಯ ವಿಭಾಗದಲ್ಲಿ 198 ವಾರ್ಡ್​ಗಳಿಗೂ ಇದ್ದ ಏಕೈಕ ಎಫ್.ಡಿ.ಎ ಮಾಯಣ್ಣ. ಮಾಯಣ್ಣ ಬಿಬಿಎಂಪಿಯ ರಸ್ತೆ ಅಭಿವೃದ್ದಿ ಮತ್ತು ಮೂಲಭೂತ ಸೌಕರ್ಯದ ಎಫ್​ಡಿಎ ನೌಕರ. ಮಾಯಣ್ಣ ತಂಗಿ, ಬಾಮೈದ ಹಾಗೂ ತಮ್ಮಂದಿರ ಮನೆ ಸೇರಿ ಒಟ್ಟು ಎಂಟು ಕಡೆ ದಾಳಿ ಮಾಡಲಾಗಿದೆ. ಕತ್ರಿಗುಪ್ಪೆ, ನಾಯಂಡಳ್ಳಿ, ವಿದ್ಯಾಪೀಠ ಸೇರಿ ಒಟ್ಟು ಎಂಟು ಕಡೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಮಾಯಣ್ಣ ಬಳಿ 50 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಪತ್ತೆಯಾಗಿದೆ ಎನ್ನಲಾಗಿದೆ. ಬೆಂಗಳೂರಿನ ಹಲವು ಕಡೆ ಹತ್ತಾರು ಮನೆ, ಸೈಟ್‌ ಹಾಗೂ ಕೋಟ್ಯಂತರ ಬ್ಯಾಂಕ್ ಬ್ಯಾಲೆನ್ಸ್ ಹೊಂದಿದ್ದಾರೆ ಎನ್ನಲಾಗಿದೆ.

ಮಾಯಣ್ಣರ ಅಕ್ರಮ ಆಸ್ತಿ ಕಂಡು ಎಸಿಬಿ ಬೆಚ್ಚಿಬಿದ್ದಿದೆ ಎಂದು ಹೇಳಲಾಗಿದೆ. ಈ ಹಿಂದೆ ನಕಲಿ ಬಿಲ್ ಸೃಷ್ಟಿಸಿ ಕೋಟ್ಯಾಂತರ ರೂ. ನಷ್ಟ ಮಾಡಿರುವ ಆರೋಪ ಮಾಯಣ್ಣನ ಮೇಲಿದೆ. ನಕಲಿ ಸಹಿ, ಬಿಲ್‌, ದಾಖಲೆ ಸೃಷ್ಟಿಸಿ ವಂಚನೆ ಮಾಡಿದ್ದಾರೆಂಬ ಆರೋಪವಿದೆ. ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಈ ಹಿಂದೆ ದೂರು ದಾಖಲಾಗಿತ್ತು. ಮಾಯಣ್ಣ ಮನೆ ಮೇಲೆ ದಾಳಿ ವೇಳೆ ಅಕ್ರಮ ಆಸ್ತಿ-ಪಾಸ್ತಿ ಪತ್ತೆಯಾಗಿದೆ. ದಾಖಲೆಯಿಲ್ಲದ ಹಣ, ಕೆಜಿಗಟ್ಟಲೆ ಚಿನ್ನಾಭರಣ ಪತ್ತೆಯಾಗಿದೆ ಎನ್ನಲಾಗಿದೆ.

RELATED TOPICS:
English summary :Bangalore

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...