ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದ್ರೆ ಅಂಬರೀಶ್ಗೂ ಸಿಕ್ಕಿದಂತೆ! | ಜನತಾ ನ್ಯೂಸ್
ಬೆಂಗಳೂರು : ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದರೆ ಅಂಬರೀಶ್ಗೂ ಸಿಕ್ಕಿದಂಗೆ ಅನ್ನೋದು ನನ್ನ ಅಭಿಪ್ರಾಯ. ಅದರಲ್ಲಿ ಯಾವುದೇ ಭೇದಭಾವ ಇಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಇಂದು ಅಂಬರೀಶ್ ಅವರ ಮೂರನೇ ವರ್ಷದ ಪುಣ್ಯತಿಥಿ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಅವರು ಮಾತನಾಡಿ, ಅಂಬರೀಶ್ ಇಲ್ಲವಾಗಿ 3 ವರ್ಷವಾಗಿದೆ. ಅವರ ಹೆಸರಲ್ಲಿ ಏನೂ ಮಾಡಿಲ್ಲ ಎನ್ನುವ ಬೇಸರ ಅಭಿಮಾನಿಗಳಲ್ಲಿದೆ. ಸ್ಮಾರಕ ಸೇರಿ ಎಲ್ಲೂ ಅಂಬರೀಶ್ ಅವರ ಹೆಸರು ಕೇಳಿಬಂದಿಲ್ಲ ಎಂದು ಅಭಿಮಾನಿಗಳ ಬೇಸರದ ಬಗ್ಗೆ ಹೇಳಿದರು.
ಈ ವೇಳೆ ಅಂಬರೀಶ್ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ವಿಚಾರವಾಗಿ ಮಾತನಾಡಿದ ಸಂಸದೆ, ಪುನೀತ್ಗೆ ಸಿಕ್ಕ ಗೌರವ ಅಂಬರೀಶ್ ಅವ್ರಿಗೂ ಸಿಗುತ್ತೆ, ನನಗೆ ನಂಬಿಕೆ ಇದೆ ಎಂದು ಹೇಳಿದರು.
ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದರೆ ಅಂಬರೀಶ್ಗೂ ಸಿಕ್ಕಂತೆಯೇ. ಅಂಬರೀಶ್ ಅವರಿಗೆ ಏನು ಗೌರವ ಸಿಗಬೇಕಿತ್ತೋ ಅದು ಸಿಕ್ಕೇ ಸಿಕ್ಕುತ್ತೆ ಎಂಬ ಭರವಸೆ ಇದೆ. ಅದು ಆಗಲೇ ಸಿಕ್ಕಿದೆ. ಅದು ಜನರ ಪ್ರೀತಿ, ಅದೇ ದೊಡ್ಡ ಪ್ರಶಸ್ತಿ. ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದ್ರೆ ಅಂಬರೀಶ್ಗೂ ಸಿಕ್ಕಿದಂಗೆ ಅನ್ನೋದು ನನ್ನ ಅಭಿಪ್ರಾಯ. ಅದರಲ್ಲಿ ಯಾವುದೇ ಭೇದಭಾವ ಇಲ್ಲ.
ಒಂದು ವೇಳೆ ಅಂಬರೀಶ್ ಈಗ ಇದ್ದಿದ್ರೆ ಅವ್ರಿಗೆ ಸಿಗೋದ್ಕಿಂತ ಅಪ್ಪುಗೆ ಪ್ರಶಸ್ತಿ ಕೊಟ್ಟಿರೋದಕ್ಕೆ ಅವರು ಹೆಮ್ಮೆ ಪಡುತ್ತಿದ್ದರು, ಸಂತೋಷ ಪಡುತ್ತಿದ್ದರು ಎಂದು ಸುಮಲತಾ ಅಂಬರೀಶ್ ಹೇಳಿದರು. ಅಭಿಮಾನಿಗಳು ಕೂಡ ಇದೇ ರೀತಿಯ ಭಾವನೆಗಳನ್ನು ಅಳವಡಿಸಿಕೊಳ್ಳಬೇಕೆಂದು ಮನವಿ ಮಾಡುತ್ತೇನೆ ಎಂದರು.