ಮೊಟ್ಟೆ ಬದಲು ತಾಯಿ ಕೈಗೆ ದುಡ್ಡು ಕೊಟ್ಟರೆ ಇನ್ನೂ ಚೆನ್ನಾಗಿ ಆಹಾರ ಹಾಕಬಹುದು | ಜನತಾ ನ್ಯೂಸ್
ಚಿಕ್ಕಮಗಳೂರು : ಮಕ್ಕಳ ಆಹಾರವನ್ನು ತಾಯಿಗೆ ಬಿಡಬೇಕು. ತಾಯಿಗಿಂತ ಮಕ್ಕಳನ್ನು ಚೆನ್ನಾಗಿ ಯಾರೂ ನೋಡಿಕೊಳ್ಳುವುದಿಲ್ಲ. ಮೊಟ್ಟೆ ಬದಲು ಆ ತಾಯಿ ಕೈಗೆ ದುಡ್ಡು ಕೊಟ್ಟರೆ, ಇನ್ನೂ ಚೆನ್ನಾಗಿ ಆಹಾರವನ್ನು ಹಾಕಬಹುದು ಎಂದಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆಯನ್ನು ತಿನ್ನಲು ಕೊಡುವ ವಿಚಾರವಾಗಿ ಹಲವು ಧಾರ್ಮಿಕ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಶಾಲೆಗಳಲ್ಲಿ ಮೊಟ್ಟೆ ನೀಡುವ ವಿಚಾರಕ್ಕೆ ಸಂಬಂಧಿಸಿ ಕಳೆದ ಕೆಲವು ದಿನಗಳಿಂದ ಪರ- ವಿರೋಧ ವಿವಿಧ ಅಭಿಪ್ರಾಯಗಳು ಕೇಳಿಬಂದಿದೆ.
ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಕ್ಕಳ ಆಹಾರವನ್ನು ತಾಯಿಗೆ ಬಿಡಬೇಕು. ತಾಯಿಗಿಂತ ಮಕ್ಕಳನ್ನು ಚೆನ್ನಾಗಿ ಯಾರೂ ನೋಡಿಕೊಳ್ಳಲ್ಲ. ಮೊಟ್ಟೆ ಬದಲು ಆ ತಾಯಿ ಕೈಗೆ ದುಡ್ಡು ಕೊಟ್ಟರೆ, ಇನ್ನೂ ಚೆನ್ನಾಗಿ ಆಹಾರವನ್ನ ಹಾಕಬಹುದು. ಈ ಬಗ್ಗೆಯೂ ಚರ್ಚೆ ಆಗಬೇಕು ಎಂದರು.
ಆಹಾರ ಪದ್ದತಿ ಅವರವರ ಆಯ್ಕೆ, ಇದಕ್ಕೆ ಒತ್ತಡ ಹೇರುವುದು ಸರಿಯಲ್ಲ. ಸರ್ಕಾರ, ಯಾವುದೇ ವ್ಯಕ್ತಿಗಳು ಒತ್ತಡ ತಂದು ಬದಲಾಯಿಸಲು ಆಗುವುದಿಲ್ಲ. ಮೊಟ್ಟೆ ಕೊಡುವುದು ಕೆಲ ಸಮಾಜಕ್ಕೆ ನೋವು ತರುತ್ತೆ ಅಂದ್ರೆ ಸರ್ಕಾರ ವಿಚಾರವನ್ನು ಮರುಪರಿಶೀಲನೆ ಮಾಡಬೇಕು.
ಈ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸಿ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.