ಕ್ರೈಸ್ತ ಧರ್ಮಕ್ಕೆ ಮತಾಂತರವಾದ್ರೆ ಸಿದ್ದರಾಮಯ್ಯಗೆ ಜಾಗ ಎಲ್ಲಿದೆ: ಸಿ.ಟಿ ರವಿ | ಜನತಾ ನ್ಯೂಸ್
ಚಿಕ್ಕಮಗಳೂರು : ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಸಿದ್ದರಾಮಯ್ಯಗೆ ಎಲ್ಲಿ ಜಾಗ ಸಿಗುತ್ತದೆ ಎಂದು ಶಾಸಕ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ.
ಹಿಂದೂಗಳು ಬೌದ್ಧರು, ವೈಷ್ಣವರಾದರೆ ಅಂಬೇಡ್ಕರ್, ರಾಮನಿಗೆ ಜಾಗ ಸಿಗುತ್ತದೆ. ಜೈನರ ಮನೆಯಲ್ಲಿ ರಾಮ, ಗಣಪತಿಗೆ ಜಾಗ ಇದೆ. ಇಸ್ಲಾಮಿಗೆ ಪರಿವರ್ತನೆಯಾದರೆ ಅಂಬೇಡ್ಕರ್, ಬುದ್ಧನಿಗೂ ಜಾಗವಿಲ್ಲ ಎಂದರು.
ಮತಾಂತರ ಮತಗಳ ಗಳಿಕೆಗೆ ಇರೋ ಸಾಧನ ಅಲ್ಲ. ಮತಾಂತರ ದೇಶಾಂತರಕ್ಕೆ ಸಮ ಅಂತ ಗಾಂಧಿಜೀ ಹೇಳಿದ್ದರು.ಕಾಂಗ್ರೆಸ್ ನಮ್ದು ಗೋಡ್ಸೆ ಹಿಂದುತ್ವ ಅಲ್ಲ, ಗಾಂಧಿ ಹಿಂದುತ್ವ ಅನ್ನುತ್ತಾರೆ. ಮತಾಂತರದ ಬಗ್ಗೆ ಗಾಂಧಿ ಏನು ಹೇಳಿದ್ದರು ಅಂತ ಕಾಂಗ್ರೆಸ್ ಇತಿಹಾಸ ಓದಲಿ.
ಸಿದ್ದರಾಮಯ್ಯನವರೇ ನೀವು ಒಮ್ಮೆ ಇತಿಹಾಸ ಓದಿ. ಮತಾಂತರ ನಿಷೇಧ ಕಾಯ್ದೆ ಅಂದರೆ ಅವರವರ ಮತದಲ್ಲಿ ಸುರಕ್ಷಿತವಾಗಿ ಮತಾಚರಣೆ ಮಾಡಲಿ ಎನ್ನುವುದು. ವ್ಯಾಪಾರ, ಭಯ, ಆಮಿಷದ ಮೂಲಕ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಕಿಡಿಕಾರಿದ್ದಾರೆ.