ಹೊಸ ವರ್ಷಾಚರಣೆ: ಡಿಡಿ.30ರಿಂದ ನಂದಿ ಬೆಟ್ಟ ಪ್ರವೇಶ ನಿರ್ಬಂಧ | ಜನತಾ ನ್ಯೂಸ್
ಚಿಕ್ಕಬಳ್ಳಾಪುರ : ಕೋವಿಡ್ ಪರಿಸ್ಥಿತಿ ನೋಡಿಕೊಂಡು ಪ್ರಮುಖ ಜಿಲ್ಲೆಗಳಲ್ಲಿ ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.
ಹೊಸ ವರ್ಷದ ದಿನದಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮದಲ್ಲಿ ಹೊಸ ವರ್ಷಾಚರಣೆ ನಿಷೇಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್. ಲತಾ ಆದೇಶ ಹೊರಡಿಸಿದ್ದಾರೆ.
ಕೋವಿಡ್-19 ರೂಪಾಂತರಿ ಓಮಿಕ್ರಾನ್ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳೂ ಇರುವುದರಿಂದ, ಪರಿಸರವನ್ನು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಡಿ.31ರ ಮಧ್ಯರಾತ್ರಿ ಹಾಗೂ 2022ರ ಜನವರಿ 1ರಂದು ನಂದಿ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ರಾಜ್ಯದಾದ್ಯಂತ ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಹೇರಿದ್ದು, ಡಿಸೆಂಬರ್ 30ರಿಂದ ಜನವರಿ 2ರವರೆಗೆ ಬಹಿರಂಗವಾಗಿ ಗುಂಪು ಗುಂಪಾಗಿ ಜನ ಸೇರುವುದನ್ನು ನಿರ್ಬಂಧಿಸಲಾಗಿದೆ. ಅಪಾರ್ಟ್ಮೆಂಟ್ಗಳಲ್ಲಿ ಡಿಜೆ ಪಾರ್ಟಿ ಮಾಡುವಂತಿಲ್ಲ. ಕ್ಲಬ್ಗಳಲ್ಲಿ ಸ್ಪೆಷಲ್ ಈವೆಂಟ್ ಮಾಡಲು ಶೇ.50ರಷ್ಟು ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.