ಪತ್ನಿ ಸಾವಿನಿಂದ ಮನನೊಂದು ನೇಣಿಗೆ ಶರಣಾದ ಪತಿ | ಜನತಾ ನ್ಯೂಸ್
ಚಿಕ್ಕಬಳ್ಳಾಪುರ : ಹೆಂಡತಿ ಸಾವಿನಿಂದ ಮನನೊಂದ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಬೂದಿಗೆರೆ ಗ್ರಾಮದಲ್ಲಿ ನಡೆದಿದೆ.
ಬೂದಿಗೆರೆ ಗ್ರಾಮದ ವಿಜಯೇಂದ್ರ(38) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು. ಇವರ ಪತ್ನಿ ಲಾವಣ್ಯ(34) ಅನಾರೋಗ್ಯದಿಂದ ಮೃತಪಟ್ಟಿದ್ದರು.
9 ವರ್ಷಗಳ ಹಿಂದೆ ಮದುವೆಯಾಗಿದ್ದ ಇಬ್ಬರು ಬೂದಿಗ್ರಾಮದಲ್ಲಿ ವಾಸವಾಗಿದ್ದರು, ದಂಪತಿಗೆ ಮಕ್ಕಳು ಇರಲಿಲ್ಲ, ಅನಾರೋಗ್ಯದಿಂದ ಬಳಲುತ್ತಿದ್ದ ಲಾವಣ್ಯ ಇಂದು ಬೆಳಗ್ಗೆ ಮನೆಯಲ್ಲಿ ಸಾವನ್ನಪ್ಪಿದ್ದಾರೆ.
ಮನೆಯ ಮುಂದೆಯೇ ಚಿಲ್ಲರೆ ಅಂಗಡಿ ಇಟ್ಟುಕೊಂಡಿದ್ದ ವಿಜಯೇಂದ್ರ, ಬೆಳಗ್ಗೆ ಅಂಗಡಿ ತೆಗೆದಿಲ್ಲ ಏಕೆ ಎಂದು ಅಕ್ಕಪಕ್ಕದವರು ಮನೆಯ ಬಾಗಿಲು ಬಡೆದಿದ್ದಾರೆ ಆದರೆ ಬಾಗಿಲು ತೆರೆಯಲ್ಲಿಲ್ಲ. ಆಗ ಸ್ನೇಹಿತರು, ಸಂಬಂಧಿಕರು ಬಂದು ಬಾಗಿಲು ಒಡೆದು ಒಳಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ.
ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.