ಸೆಲ್ಫಿ ಫೋಟೋ ತೆಗೆಯಲು ಹೋಗಿ ಜಲಪಾತಕ್ಕೆ ಬಿದ್ದು ವಿದ್ಯಾರ್ಥಿ ಸಾವು! | ಜನತಾ ನ್ಯೂಸ್
ಚಾಮರಾಜನಗರ : ಹೊಗೆನಕಲ್ ಜಲಪಾತದಲ್ಲಿ ಸೆಲ್ಫಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋದ ವಿದ್ಯಾರ್ಥಿ ನೀರುಪಾಲಾದ ಘಟನೆ ಹನೂರು ತಾಲೂಕಿನಲ್ಲಿ ಸಂಭವಿಸಿದೆ.
ಮೈಸೂರು ಮೂಲದ ಸಂಗಮೇಶ್ ಎಂಬುವರ ಮಗ ಉಮಾಶಂಕರ್(19) ಮೃತ ದುರ್ದೈವಿ.
ಈತ ಸ್ನೇಹಿತರಾದ ರವಿಕುಮಾರ್, ಶಿವಪ್ರಸಾದ್ ಅವರೊಟ್ಟಿವೆ ರಜೆಗೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೊಗೆನಕಲ್ ಜಲಪಾತಕ್ಕೆ ತೆರಳಿದ್ದಾರೆ.
ಜಲಪಾತದ ತುದಿಯೊಂದರ ಬಳಿ ತೆರಳಿ ತನ್ನ ಸ್ನೇಹಿತರಿಗೆ ಫೋಟೋ ತೆಗೆಯುವಂತೆ ಹೇಳಿದ್ದಾನೆ. ಸ್ನೇಹಿತರು ಫೋಟೋಗಳನ್ನು ತೆಗೆದ ಬಳಿಕ ಜಲಪಾತದ ಕೊರಕಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾದ ವೇಳೆ ಕಾಲುಜಾರಿ ನೀರಿಗೆ ಬಿದ್ದಿದ್ದಾನೆ.
80 ಅಡಿಗೂ ಹೆಚ್ಚು ಆಳವಾದ ಜಾಗಕ್ಕೆ ಉಮಾಶಂಕರ್ ಬಿದ್ದಿದ್ದಾನೆ. ಮಲೆ ಮಹದೇಶ್ವರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.