ಪೊಲೀಸ್ ಕಾನ್ಸ್ಟೆಬಲ್ ಮತ್ತು ಪತ್ನಿ ಆತ್ಮಹತ್ಯೆ ಯತ್ನ, ಪತ್ನಿ ಸಾವು! | ಜನತಾ ನ್ಯೂಸ್
ಚಿಕ್ಕಬಳ್ಳಾಪುರ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಕಾನ್ಸ್ಟೆಬಲ್ ಮತ್ತು ಪತ್ನಿ ಆತ್ಮಹತ್ಯೆ ಯತ್ನಸಿದ್ದು, ಪತ್ನಿ ಸಾವಿಗೀಡಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಣಕನೂರು ಗ್ರಾಮದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದ ಅಣಕನೂರು ಗ್ರಾಮದಲ್ಲಿ ಪೊಲೀಸ್ ಕಾನ್ಸ್ಟೆಬಲ್ ಸುರೇಂದ್ರ ಹಾಗೂ ಅವರ ಪತ್ನಿ ಸ್ನೇಹ ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೇದೆ ಸುರೇಂದ್ರ ಅವರ ಪತ್ನಿ ಸ್ನೇಹಾ(25) ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುದ್ದಿ ತಿಳಿದ ತಕ್ಷಣ ಸುರೇಂದ್ರ ಸಹ ಚಾಕುವಿನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೌಟುಂಬಿಕ ಕಲಹ ಎಂದು ಹೇಳಲಾಗಿದ್ದರೂ ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯಿಂದ ಹೊರಬೀಳಬೇಕಿದೆ.