ಸೀಮಂತದ ವೇಳೆ ಸಿಲಿಂಡರ್ ಸ್ಪೋಟ; 8 ಮಂದಿಯ ಪರಿಸ್ಥಿತಿ ಚಿಂತಾಜನಕ, 20 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ | ಜನತಾ ನ್ಯೂಸ್
ಯಾದಗಿರಿ : ಸೀಮಂತ ಕಾರ್ಯಕ್ರಮವೊಂದರಲ್ಲಿ ಸಿಲಿಂಡರ್ ಸ್ಪೋಟ ಗೊಂಡ ಪರಿಣಾಮ 8 ಜನರ ಪರಿಸ್ಥಿತಿ ಚಿಂತಾಜನಕವಾಗಿದ್ದು, 20 ಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡ ಭೀಕರ ದುರಂತ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಿವೃತ್ತ ನೌಕರ ಸಾಯಬಣ್ಣ ಹಗರಟಿಗಿ ಅವರ ಮನೆಯಲ್ಲಿ ಸಿಮಂತ ಕಾರ್ಯಕ್ರಮದ ಶುಭ ಸಂದರ್ಭದಲ್ಲಿ ದರ್ಘಟನೆ, ಯಾದಗಿರಿ ಜಿಲ್ಲೆಯ ದೋರನಹಳ್ಳಿ ಕ್ಯಾಂಪ್ ನಲ್ಲಿ ಇಂದು ಮಧ್ಯಾಹ್ನ 2.30ರ ಸಮಯದಲ್ಲಿ ಸೀಮಂತ ಕಾರ್ಯಕ್ರಮದಲ್ಲಿ ಅಡುಗೆ ಮಾಡೋದಕ್ಕೆ ಬಳಸಲಾಗುತ್ತಿದ್ದಂತ ಸಿಲಿಂಡರ್ ಸ್ಪೋಟಗೊಂಡಿದೆ.
ಭಾರಿ ಶಬ್ದ ಬಂದಿದ್ದರಿಂದ ಜನರು ಬೆಚ್ಚಿಬಿದ್ದಿದ್ದು, ಸುತ್ತಲಿನ ವಾತವಾರಣದಲ್ಲಿ ಕೆಲಕಾಲ ಆತಂಕದ ಪರಿಸ್ಥಿತಿ ಉಂಟಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ್ದ 20 ಕ್ಕೂ ಹೆಚ್ಚು ಜನರ ಮೈಯೆಲ್ಲ ಸುಟ್ಟಿದ್ದು, ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕಲ್ಬುರ್ಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.
20 ಜನರಲ್ಲಿ 8 ಮಂದಿ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ. ಶಹಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.