ಬೈಕ್ಗೆ ಬಸ್ ಡಿಕ್ಕಿ, ಸವಾರರ ಮೇಲೆ ಹರಿದ ಖಾಸಗಿ ಬಸ್, ಸ್ಥಳದಲ್ಲೇ ಮೂವರು ಸಾವು | ಜನತಾ ನ್ಯೂಸ್
ಚಿಕ್ಕಬಳ್ಳಾಪುರ : ಬೈಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೊನ್ನೇನಹಳ್ಳಿ ಗೇಟ್ ಬಳಿ ದುರ್ಘಟನೆ ನಡೆದಿದೆ.
ಬೈಕ್ ಸವಾರರ ಮೇಲೆ ಖಾಸಗಿ ಬಸ್ ವೇಗವಾಗಿ ಬಂದು ಗುದ್ದಿದೆ. ಪರಿಣಾಮ ಬೈಕ್ನಲ್ಲಿದ್ದ ಮೂವರು ನೆಲಕ್ಕೆ ಬಿದ್ದಿದ್ದಾರೆ. ಆಗ ಬಸ್ ಅವರ ಮೇಲೆ ಹರಿದಿದೆ. ಬೆಂಗಳೂರಿನ ಗೌಸ್ ಹಾಗೂ ಅವರ ಪತ್ನಿ ಅಮ್ಮಾಜಾನ್ ಹಾಗೂ ಮಗ ರಿಯಾನ್.
ಬೆಂಗಳೂರು ಮೂಲದ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತ ನಂತರ ಖಾಸಗಿ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.
RELATED TOPICS:
English summary :Accident in Chikkaballapura