ಚಾಮರಾಜನಗರ ಗುಡ್ಡದಲ್ಲಿ ಬಂಡೆ ಕುಸಿತ ಪ್ರಕರಣ; ಇಂದು ಮತ್ತೋರ್ವ ಕಾರ್ಮಿಕನ ಶವ ಪತ್ತೆ | ಜನತಾ ನ್ಯೂಸ್
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಬಳಿ ಗುಮ್ಮಕಲ್ಲು ಗುಡ್ಡದಲ್ಲಿ ಬಂಡೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಮಣ್ಣು, ಬಂಡೆ ಅಡಿ ಸಿಲುಕಿದ್ದ ಮತ್ತೊಬ್ಬ ಕಾರ್ಮಿಕನ ಶವ ಪತ್ತೆಯಾಗಿದೆ.
ಬಂಡೆಯಡಿ ಸಿಲುಕಿಕೊಂಡವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ನಿನ್ನೆ ಅಜಿಮುಲ್ಲಾ ಎಂಬಾತನ ಶವ ಹೊರತೆಗೆಯಲಾಗಿತ್ತು. ಮುಂದುವರಿದ ಕಾರ್ಯಾಚರಣೆಯಲ್ಲಿ ಇಂದು ಮಿರಾಜ್ ಎಂಬ ಇನ್ನೊಬ್ಬನ ಶವ ಹೊರ ತೆಗೆಯಲಾಗಿದೆ.
ಸದ್ಯ ಮಿರಾಜ್ ಹಾಗೂ ಅಜೀಮುಲ್ಲಾ ಮೃತದೇಹ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು ಮತ್ತೊಬ್ಬ ಕಾರ್ಮಿಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಬೊಮ್ಮಲಾಪುರ ಗ್ರಾಮದ ಮಹೇಂದ್ರಪ್ಪ ಎಂಬುವವರ ಜಾಗದಲ್ಲಿ ಕೇರಳ ಮೂಲದ ಉದ್ಯಮಿ ಹಕೀಮ್ ಎಂಬಾತ ಗುತ್ತಿಗೆ ಪಡೆದು ಬಿಳಿಕಲ್ಲು ಗಣಿಗಾರಿಕೆ ನಡೆಸುತ್ತಿದ್ದು, ಗಣಿಗಾರಿಕೆ ವೇಳೆ ಬಂಡೆಯೊಂದು ಜೆಸಿಬಿ ಮತ್ತು ಟಿಪ್ಪರ್ ಮೇಲೆ ಬಿದ್ದು ದುರಂತ ಸಂಭವಿಸಿದೆ ಎನ್ನಲಾಗಿದೆ.