ನಡುರಸ್ತೆಯಲ್ಲೇ ಅಟ್ಟಾಡಿಸಿ ಮಚ್ಚಿನಿಂದ 23 ಕಡೆ ಮಚ್ಚಿನಿಂದ ಹೊಡೆದು ಕೊಲ್ಲಲು ಯ್ನತ್ನಿಸಿದ ಗಂಡ! | ಜನತಾ ನ್ಯೂಸ್
ಗದಗ : ನಡುರಸ್ತೆಯಲ್ಲೇ ಅಟ್ಟಾಡಿಸಿ 23ಕ್ಕೂ ಹೆಚ್ಚು ಬಾರಿ ಅಮಾನುಷವಾಗಿ ಮಚ್ಚಿನಿಂದ ಹೊಡೆದು ಕೊಲ್ಲಲು ಯ್ನತ್ನಿಸಿರುವ ದುರ್ಘಟನೆ ಗದಗ ನಗರದ ಮುಂಡರಗಿ ರಸ್ತೆಯ ಲಯನ್ ಸ್ಕೂಲ್ ಗ್ರೌಂಡ್ ಬಳಿ ನಡೆದಿದೆ.
ಅಪೂರ್ವ ಶಿರೂರ(26) ಅಲಿಯಾಸ್ ಅರ್ಫಾನ್ ಬಾನು ಹಲ್ಲೆಗೊಳಗಾದ ಮಹಿಳೆ. ಈಕೆಯ ಗಂಡ ಇಜಾಜ್ (38) ಆರೋಪಿ. ಹಿಂದೂ ಯುವತಿ ಅಪೂರ್ವಳನ್ನು ಪ್ರೀತಿಸಿ ಹುಬ್ಬಳ್ಳಿ ಕೋಲಪೆಟೆಯ ನಿವಾಸಿ ಮುಸ್ಲಿಂ ಧರ್ಮದ ಇಜಾಜ್ 4 ವರ್ಷದ ಹಿಂದೆ ಮದ್ವೆಯಾಗಿದ್ದ. ಮದ್ವೆಯಾದ ಬಳಿಕ ಅಪೂರ್ವಗೆ ಅರ್ಫಾನ್ ಬಾನು ಎಂಬ ಹೆಸರನ್ನೂ ಇಟ್ಟಿದ್ದ.
ಈ ಮೊದಲೇ ಮದುವೆಯಾಗಿದ್ದ ವಿಷಯ ತಿಳಿದು ಅಪೂರ್ವ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಕಳೆದ 4, 5 ತಿಂಗಳಿಂದ ಗಂಡನಿಂದ ದೂರವಾಗಿದ್ದಳು.
ಗುರುವಾರ ಬೆಳಗ್ಗೆ ಗದಗ ನಗರದ ಮುಂಡರಗಿ ರಸ್ತೆಯ ಲಯನ್ ಸ್ಕೂಲ್ ಗ್ರೌಂಡ್ನಲ್ಲಿ ದ್ವಿಚಕ್ರ ವಾಹನ ಚಾಲನೆಯ ಮಾಡುವುದನ್ನ ಕಲಿಯುತ್ತಿದ್ದಳು. ಅಲ್ಲಿಗೆ ಮಚ್ಚು ಹಿಡಿದು ಬಂದ ಇಜಾಜ್, ಪತ್ನಿ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾನೆ. ಸ್ಥಳೀಯರು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಭೀಕರ ಹಲ್ಲೆ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಗಂಡನಿಂದ ಮಾರಣಾಂತಿಕ ಹಲ್ಲೆಗೊಳಗಾದ ಅಪೂರ್ವ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ.