ಸೇತುವೆಯಿಂದ ಕೆಳಕ್ಕೆ ಬಿದ್ದ ಬಸ್: ಇಬ್ಬರ ಸಾವು, ಐವರಿಗೆ ಗಾಯ | ಜನತಾ ನ್ಯೂಸ್
ಚಾಮರಾಜನಗರ : ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಕೆಳಕ್ಕೆ ಬಿದ್ದಿದ್ದು ಇಬ್ಬರು ಮೃತಪಟ್ಟು ಹಾಗೂ ಐದು ಮಂದಿ ಸ್ಥಿತಿ ಗಂಭೀರವಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕುಡುವಾಳೆ ಬಳಿ ನಡೆದಿದೆ.
ಪಿ.ಜಿ. ಪಾಳ್ಯ ಗ್ರಾಮದ ಕಡೆ ತೆರಳುತ್ತಿದ್ದ ಬಸ್ ಸೇತುವೆ ಕೆಳಗಿನ ಕಾಲುವೆಗೆ ಬಿದ್ದಿದೆ. ಈ ಅಪಘಾತದಲ್ಲಿ ಬಸ್ನಲ್ಲಿದ್ದ ಮಾಳಿಗನತ್ತ ಗ್ರಾಮದ ಶಿವಮ್ಮ (70), ಪಿ.ಜಿ. ಪಾಳ್ಯದ ರಮೇಶ್ (28) ಸಾವಿಗೀಡಾಗಿದ್ದಾರೆ. ಶಿವಮ್ಮ ಸ್ಥಳದಲ್ಲೇ ಸಾವಿಗೀಡಾಗಿದ್ದರೆ, ರಮೇಶ್ ಕಾಮಗೆರೆ ಆಸ್ಪತ್ರೆಯಲ್ಲಿ ಸಾವಿಗೀಡಾದರು. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
RELATED TOPICS:
English summary :Bus Accident in ChamarajNagar, 2 people are dead